ಉಡುಪಿ: ಕೆಲವು ಶಾಲಾ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಉಡಪಿಯಲ್ಲಿ ಇನ್ನೂ ಮುಂದುವರಿದಿದ್ದು, ಇಲ್ಲಿನ ಕಾಲೇಜೊಂದರಲ್ಲಿ ಕೋರ್ಟ್ ಮಧ್ಯಂತರ ಆದೇಶದ ಹೊರತಾಗಿಯೂ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಆಗಮಿಸಿದ್ದಾರೆ.
‘ಕೋರ್ಟ್ ಆದೇಶದ ಪ್ರಕಾರ ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ಇರಲಿಲ್ಲ. ಇದನ್ನು ವಿದ್ಯಾರ್ಥಿನಿಗಳಿಗೆ ಮನವರಿಕೆ ಮಾಡಿದ್ದೇವೆ. ಕೋರ್ಟ್ ತೀರ್ಪು ಬರುವವರೆಗೆ ಕಾಯುತ್ತೇವೆಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ. ಒಟ್ಟು 2326 ವಿದ್ಯಾರ್ಥಿನಿಯರಿದ್ದು 196 ಮಂದಿ ಮುಸ್ಲಿಂರಿದ್ದಾರೆ. ಸದ್ಯ 40 ಮಂದಿ ಮಾತ್ರ ಹಿಜಾಬ್ ತೆಗೆಯಲು ಒಪ್ಪಿಲ್ಲ’ ಎಂದು ಪ್ರಾಂಶುಪಾಲರ ಭಾಸ್ಕರ ಶೆಟ್ಟಿ ಹೇಳಿದರು.
‘ಕಾಲೇಜು ಕ್ಯಾಂಪಸ್ ನಲ್ಲಿ ಹಿಜಾಬ್ ಹಾಕಿಕೊಂಡು ತಿರುಗಾಡಲು ಅವಕಾಶ ಕೊಟ್ಟಿದ್ದೇವೆ. ತರಗತಿ ಬಾರದ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡುವ ತೀರ್ಮಾನ ತೆಗೆದುಕೊಳ್ಳುತ್ತೇವೆ. ಹೈಕೋರ್ಟ್ ಬಂದ ಮೇಲೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ. ಅಲ್ಲಿಯವರೆಗೆ ಯಥಾಸ್ಥಿತಿ ಕಾಪಾಡುತ್ತೇವೆ’ ಎಂದರು.
‘ಹಿಜಾಬ್ ನಮ್ಮ ಹೆಮ್ಮೆ. ನಾವು ಮೊದಲಿನಿಂದಲೂ ಹಿಜಾಬ್ ಹಾಕುತ್ತಿದ್ದೇವೆ. ಕೋರ್ಟ್ ಆದೇಶ ಬರುವವರೆಗೂ ಕಾಯುತ್ತೇವೆ’ ಎಂದು ವಿದ್ಯಾರ್ಥಿನಿಯೊಬ್ಬರು ಹೇಳಿದರು.
ಇದನ್ನೂ ಓದಿ :
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…