Featured

ಉಡುಪಿ: ಹಿಜಾಬ್ ಪ್ರಕರಣ : ದ್ವಿ ಸದಸ್ಯ ಪೀಠಕ್ಕೆ ನಾವು ಗೌರವ ಸಲ್ಲಿಸುತ್ತೇವೆ; ಫಿಫ್ಟಿ ಫಿಫ್ಟಿ ತೀರ್ಪು ಬರಬಹುದು ಎಂಬ ನಿರೀಕ್ಷೆ ಮೊದಲೇ ಇತ್ತು : ಹುಸೇನ್ ಕೋಡಿಬೆಂಗ್ರೆ – Vishwanews24

ಉಡುಪಿ: ಹಿಜಾಬ್ ಪ್ರಕರಣ : ದ್ವಿ ಸದಸ್ಯ ಪೀಠಕ್ಕೆ ನಾವು ಗೌರವ ಸಲ್ಲಿಸುತ್ತೇವೆ. ಫಿಫ್ಟಿ ಫಿಫ್ಟಿ ತೀರ್ಪು ಬರಬಹುದು ಎಂಬ ನಿರೀಕ್ಷೆ ಮೊದಲೇ ಇತ್ತು : ಹುಸೇನ್ ಕೋಡಿಬೆಂಗ್ರೆ

ಉಡುಪಿ : ಹಿಜಾಬ್ ಕುರಿತಾಗಿ ದ್ವಿಸದಸ್ಯ ಪೀಠದಿಂದ ವಿಭಿನ್ನ ಅಭಿಪ್ರಾಯಗಳು ಬಂದಿವೆ. ಫಿಫ್ಟಿ ಫಿಫ್ಟಿ ತೀರ್ಪು ಬರಬಹುದು ಎಂಬ ನಿರೀಕ್ಷೆ ಮೊದಲೇ ಇತ್ತು. ನ್ಯಾಯ ವ್ಯವಸ್ಥೆಗೆ ನಾವು ಸಲಾಂ ಕೊಡುತ್ತೇವೆ ಎಂದು ಸುಪ್ರೀಂ ಕೋರ್ಟ್ ಅರ್ಜಿದಾರ, ಎಪಿಸಿಆರ್ ಸಂಚಾಲಕ ಹುಸೇನ್ ಕೋಡಿಬೆಂಗ್ರೆ ಹೇಳಿದ್ದಾರೆ.

ಹಿಜಾಬ್ ಕುರಿತ ಸುಪ್ರೀಂ ಕೋರ್ಟ್‌ ದ್ವಿಸದಸ್ಯ ಪೀಠ ವಿಭಿನ್ನ ತೀರ್ಪು ಪ್ರಕಟಿಸಿರುವ ಕಾರಣ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಯಥಾಸ್ಥಿತಿಯಲ್ಲಿಟ್ಟಿರುವ ಸುಪ್ರೀಂ ಕೋರ್ಟ್ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನ್ಯಾಯಯುತ ಮತ್ತು ಮೂಲಭೂತ ಹಕ್ಕಿಗೆ ನಮ್ಮ ಭಾರತದಲ್ಲಿ ಅವಕಾಶವಿದೆ ಎಂದು ಇವತ್ತು ಸಾಬೀತಾಗಿದೆ. ಹೆಣ್ಣು ಮಕ್ಕಳಿಗೆ ಹೆಚ್ಚು ಶೈಕ್ಷಣಿಕವಾಗಿ ಸಹಾಯ ಮಾಡಬೇಕು, ತುಳಿಯಬಾರದು. ಮೂಲಭೂತ ಹಕ್ಕಿಗೆ ಮಾನ್ಯತೆ ಕೊಡಬೇಕು ಎಂದು ಕೋರ್ಟ್‌ನಲ್ಲಿ ಚರ್ಚೆಯಾಗಿದೆ. ಸಂತ್ರಸ್ಥರ ಪರವಾಗಿ ಹಲವಾರು ಅಂಶಗಳು ಚರ್ಚೆಗೆ ಬಂದಿವೆ. ಮಕ್ಕಳ ಮೂಲಭೂತ ಹಕ್ಕು ಮತ್ತು ಶಿಕ್ಷಣಕ್ಕೆ ಕೋರ್ಟ್ ಸಹಕಾರ ನೀಡುತ್ತದೆ ಎಂಬ ನಂಬಿಕೆ ಇದೆ ಎಂದರು.

ಬಂಟ್ವಾಳ : ಅಂಗಡಿ ಶಟರ್​ನಲ್ಲಿ ಕಾಣಿಸಿಕೊಂಡ ನೇಮ್ ಜಿಹಾದ್ ಬರಹ – Vishwanews24

ದ್ವಿ ಸದಸ್ಯ ಪೀಠಕ್ಕೆ ನಾವು ಗೌರವ ಸಲ್ಲಿಸುತ್ತೇವೆ. ಫಿಫ್ಟಿ ಫಿಫ್ಟಿ ತೀರ್ಪು ಬರಬಹುದು ಎಂಬ ನಿರೀಕ್ಷೆ ಮೊದಲೇ ಇತ್ತು. ದೇಶದ ಸಾವಿರಾರು ವಿದ್ಯಾರ್ಥಿನಿಯರ ಶಿಕ್ಷಣದ ವಿಚಾರ ಇದು. ಸಂವಿಧಾನದಲ್ಲಿ ಶಿಕ್ಷಣಕ್ಕೆ ಅವಕಾಶ ಇದೆ ಎಂದು ಭಾವಿಸುತ್ತೇವೆ ಎಂದು ಪ್ರತಿಕ್ರಿಯಿಸಿದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

3 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

3 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

3 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago