ಉಡುಪಿ : ಹಿಜಾಬ್ ಕುರಿತಾಗಿ ದ್ವಿಸದಸ್ಯ ಪೀಠದಿಂದ ವಿಭಿನ್ನ ಅಭಿಪ್ರಾಯಗಳು ಬಂದಿವೆ. ಫಿಫ್ಟಿ ಫಿಫ್ಟಿ ತೀರ್ಪು ಬರಬಹುದು ಎಂಬ ನಿರೀಕ್ಷೆ ಮೊದಲೇ ಇತ್ತು. ನ್ಯಾಯ ವ್ಯವಸ್ಥೆಗೆ ನಾವು ಸಲಾಂ ಕೊಡುತ್ತೇವೆ ಎಂದು ಸುಪ್ರೀಂ ಕೋರ್ಟ್ ಅರ್ಜಿದಾರ, ಎಪಿಸಿಆರ್ ಸಂಚಾಲಕ ಹುಸೇನ್ ಕೋಡಿಬೆಂಗ್ರೆ ಹೇಳಿದ್ದಾರೆ.
ಹಿಜಾಬ್ ಕುರಿತ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ವಿಭಿನ್ನ ತೀರ್ಪು ಪ್ರಕಟಿಸಿರುವ ಕಾರಣ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಯಥಾಸ್ಥಿತಿಯಲ್ಲಿಟ್ಟಿರುವ ಸುಪ್ರೀಂ ಕೋರ್ಟ್ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನ್ಯಾಯಯುತ ಮತ್ತು ಮೂಲಭೂತ ಹಕ್ಕಿಗೆ ನಮ್ಮ ಭಾರತದಲ್ಲಿ ಅವಕಾಶವಿದೆ ಎಂದು ಇವತ್ತು ಸಾಬೀತಾಗಿದೆ. ಹೆಣ್ಣು ಮಕ್ಕಳಿಗೆ ಹೆಚ್ಚು ಶೈಕ್ಷಣಿಕವಾಗಿ ಸಹಾಯ ಮಾಡಬೇಕು, ತುಳಿಯಬಾರದು. ಮೂಲಭೂತ ಹಕ್ಕಿಗೆ ಮಾನ್ಯತೆ ಕೊಡಬೇಕು ಎಂದು ಕೋರ್ಟ್ನಲ್ಲಿ ಚರ್ಚೆಯಾಗಿದೆ. ಸಂತ್ರಸ್ಥರ ಪರವಾಗಿ ಹಲವಾರು ಅಂಶಗಳು ಚರ್ಚೆಗೆ ಬಂದಿವೆ. ಮಕ್ಕಳ ಮೂಲಭೂತ ಹಕ್ಕು ಮತ್ತು ಶಿಕ್ಷಣಕ್ಕೆ ಕೋರ್ಟ್ ಸಹಕಾರ ನೀಡುತ್ತದೆ ಎಂಬ ನಂಬಿಕೆ ಇದೆ ಎಂದರು.
ಬಂಟ್ವಾಳ : ಅಂಗಡಿ ಶಟರ್ನಲ್ಲಿ ಕಾಣಿಸಿಕೊಂಡ ನೇಮ್ ಜಿಹಾದ್ ಬರಹ – Vishwanews24
ದ್ವಿ ಸದಸ್ಯ ಪೀಠಕ್ಕೆ ನಾವು ಗೌರವ ಸಲ್ಲಿಸುತ್ತೇವೆ. ಫಿಫ್ಟಿ ಫಿಫ್ಟಿ ತೀರ್ಪು ಬರಬಹುದು ಎಂಬ ನಿರೀಕ್ಷೆ ಮೊದಲೇ ಇತ್ತು. ದೇಶದ ಸಾವಿರಾರು ವಿದ್ಯಾರ್ಥಿನಿಯರ ಶಿಕ್ಷಣದ ವಿಚಾರ ಇದು. ಸಂವಿಧಾನದಲ್ಲಿ ಶಿಕ್ಷಣಕ್ಕೆ ಅವಕಾಶ ಇದೆ ಎಂದು ಭಾವಿಸುತ್ತೇವೆ ಎಂದು ಪ್ರತಿಕ್ರಿಯಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…