Featured

ಉಡುಪಿ: ಹಿಜಾಬ್ ವಿವಾದ – ಈ ಗೊಂದಲವನ್ನು ನಿಲ್ಲಿಸಲು ಹಿಂದು ಸಂಘಟನೆಗೆ ಐದು ನಿಮಿಷದ ಕೆಲಸ : ಯಶ್ಪಾಲ್ ಸುವರ್ಣ

ಹಿಂದು ಸಂಘಟನೆಯ ಮುಖಾಂತರ ಸರಿಯಾದ ಉತ್ತರ ಕೊಡಲು ನಮಗೆ ಗೊತ್ತಿದೆ ..

ಸಿಎಫ್ಐ, ಪಿಎಫ್ಐ ಸಂಘಟನೆಯ ಕುಮ್ಮಕ್ಕಿನಿಂದ ಈ ವಿವಾದ..

ಉಳಿದ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಮುಂದಿನ ನಿರ್ಧಾರ..

ಉಡುಪಿ: ಸರಕಾರಿ ಮಹಿಳಾ ಕಾಲೇಜಿನಲ್ಲಿ ಹಿಜಾಬ್ ವಿವಾದ ನಡೆಯುತ್ತಿದ್ದು, ಈ ಗೊಂದಲವನ್ನು ನಿಲ್ಲಿಸುವುದಾದರೆ ಹಿಂದು ಸಂಘಟನೆಗೆ ಐದು ನಿಮಿಷದ ಕೆಲಸ. ಆದರೆ ಇದು ವಿದ್ಯಾರ್ಥಿನಿಯರ ಭವಿಷ್ಯದ ಪ್ರಶ್ನೆ ಸಿಎಫ್ಐ, ಪಿಎಫ್ಐ ಸಂಘಟನೆಯ ಕುಮ್ಮಕ್ಕಿನಿಂದ ಈ ವಿವಾದ ನಡೆಯುತ್ತಿದೆ” ಎಂದು ಸರಕಾರಿ ಬಾಲಕಿಯರ ಕಾಲೇಜು ಆಡಳಿತ ಅಭಿವೃದ್ಧಿ ಮಂಡಳಿಯ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಆರು ಜನ ಮುಸ್ಲಿಂ ವಿದ್ಯಾರ್ಥಿನಿಯರಿಂದ 900 ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುವ ಕೆಲಸ ಮಾಡುತ್ತಿದ್ದಾರೆ. ಸಂಘಟನೆಯ ಮತ್ತು ಆಡಳಿತ ಮಂಡಳಿಯ ಸದಸ್ಯನಾಗಿ ಉಳಿದ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಮುಂದಿನ ನಿರ್ಧಾರ ತೆಗೆದು ಕೊಳ್ಳಬೇಕಾಗಿದೆ. ಅವರು ಸವಾಲಿನಿಂದ ಈ ಗೊಂದಲವನ್ನು ಉಂಟು ಮಾಡ್ತ ಇದ್ದಾರೆ ಎಂದರೆ ಅದಕ್ಕೆ ಹಿಂದು ಸಂಘಟನೆಯ ಮುಖಾಂತರ ಸರಿಯಾದ ಉತ್ತರ ಕೊಡಲು ನಮಗೆ ಗೊತ್ತಿದೆ” ಎಂದರು.

ಇದನ್ನೂ ಓದಿ :

ಇನ್ನು “ಆಡಳಿತ ಮಂಡಳಿಯ ಬಗ್ಗೆ ಮಾತ್ರ ಮಾತಾಡಬೇಕು. ಅದನ್ನು ಹೊರತಾಗಿ ವಿಷಯ ಮಾತಾಡಿದರೆ ಸಂಘಟನೆಯ ಹಿಂದು ಕಾರ್ಯಕರ್ತನಾಗಿ ನಾನು ಮಾತನಾಡಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ಶಿಕ್ಷಣದ ವಿಚಾರದಲ್ಲಿ ಏನಾದರೂ ಕೊರತೆ ಇದ್ದಿದ್ದರೆ ಸರಿಪಡಿಸಬಹುದು. ಆದರೆ ಉದ್ದೇಶ ಪೂರ್ವಕವಾಗಿ ಮಾಡುತ್ತಿರುವ ಹಿಜಾಬ್ ವಿಚಾರದಲ್ಲಿ ಯಾವುದೇ ಹೊಂದಾಣಿಕೆ ಇಲ್ಲ. ಹೆತ್ತ ತಂದೆ ತಾಯಿಗೆ ಗೌರವ ಕೊಡುವಂತೆ ಗುರುಗಳಿಗೂ ಗೌರವ ಕೊಡಬೇಕು. ಅದು ಬಿಟ್ಟು ಅನ್ಯ ಪುರುಷರು ಎನ್ನುವ ಭಾವ ಸರಿಯಲ್ಲ” ಎಂದಿದ್ದಾರೆ.

ಇನ್ನು ಸಾಕಷ್ಟು ಬಾರಿ ಶಾಸಕರು ಮತ್ತು ಶಾಲಾ ಕಾಲೇಜು ಮಂಡಳಿ ಪೋಷಕರಲ್ಲಿ ಮನವಿ ಮಾಡಿದ್ದಾರೆ. ಆನ್ ಲೈನ್ ಶಿಕ್ಷಣಕ್ಕೂ ಅವಕಾಶ ನೀಡಲಾಗಿದೆ ಆದರೂ ವಿದ್ಯಾರ್ಥಿಗಳು ತಮ್ಮ ಹಠದಿಂದ ಸವಾಲು ಹಾಕುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

14 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

15 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

15 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

16 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

16 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

16 hours ago