Featured

ಉಡುಪಿ: ಹಿಜಾಬ್ ವಿವಾದ – ಈ ಗೊಂದಲವನ್ನು ನಿಲ್ಲಿಸಲು ಹಿಂದು ಸಂಘಟನೆಗೆ ಐದು ನಿಮಿಷದ ಕೆಲಸ : ಯಶ್ಪಾಲ್ ಸುವರ್ಣ

ಹಿಂದು ಸಂಘಟನೆಯ ಮುಖಾಂತರ ಸರಿಯಾದ ಉತ್ತರ ಕೊಡಲು ನಮಗೆ ಗೊತ್ತಿದೆ ..

ಸಿಎಫ್ಐ, ಪಿಎಫ್ಐ ಸಂಘಟನೆಯ ಕುಮ್ಮಕ್ಕಿನಿಂದ ಈ ವಿವಾದ..

ಉಳಿದ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಮುಂದಿನ ನಿರ್ಧಾರ..

ಉಡುಪಿ: ಸರಕಾರಿ ಮಹಿಳಾ ಕಾಲೇಜಿನಲ್ಲಿ ಹಿಜಾಬ್ ವಿವಾದ ನಡೆಯುತ್ತಿದ್ದು, ಈ ಗೊಂದಲವನ್ನು ನಿಲ್ಲಿಸುವುದಾದರೆ ಹಿಂದು ಸಂಘಟನೆಗೆ ಐದು ನಿಮಿಷದ ಕೆಲಸ. ಆದರೆ ಇದು ವಿದ್ಯಾರ್ಥಿನಿಯರ ಭವಿಷ್ಯದ ಪ್ರಶ್ನೆ ಸಿಎಫ್ಐ, ಪಿಎಫ್ಐ ಸಂಘಟನೆಯ ಕುಮ್ಮಕ್ಕಿನಿಂದ ಈ ವಿವಾದ ನಡೆಯುತ್ತಿದೆ” ಎಂದು ಸರಕಾರಿ ಬಾಲಕಿಯರ ಕಾಲೇಜು ಆಡಳಿತ ಅಭಿವೃದ್ಧಿ ಮಂಡಳಿಯ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಆರು ಜನ ಮುಸ್ಲಿಂ ವಿದ್ಯಾರ್ಥಿನಿಯರಿಂದ 900 ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುವ ಕೆಲಸ ಮಾಡುತ್ತಿದ್ದಾರೆ. ಸಂಘಟನೆಯ ಮತ್ತು ಆಡಳಿತ ಮಂಡಳಿಯ ಸದಸ್ಯನಾಗಿ ಉಳಿದ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಮುಂದಿನ ನಿರ್ಧಾರ ತೆಗೆದು ಕೊಳ್ಳಬೇಕಾಗಿದೆ. ಅವರು ಸವಾಲಿನಿಂದ ಈ ಗೊಂದಲವನ್ನು ಉಂಟು ಮಾಡ್ತ ಇದ್ದಾರೆ ಎಂದರೆ ಅದಕ್ಕೆ ಹಿಂದು ಸಂಘಟನೆಯ ಮುಖಾಂತರ ಸರಿಯಾದ ಉತ್ತರ ಕೊಡಲು ನಮಗೆ ಗೊತ್ತಿದೆ” ಎಂದರು.

ಇದನ್ನೂ ಓದಿ :

ಇನ್ನು “ಆಡಳಿತ ಮಂಡಳಿಯ ಬಗ್ಗೆ ಮಾತ್ರ ಮಾತಾಡಬೇಕು. ಅದನ್ನು ಹೊರತಾಗಿ ವಿಷಯ ಮಾತಾಡಿದರೆ ಸಂಘಟನೆಯ ಹಿಂದು ಕಾರ್ಯಕರ್ತನಾಗಿ ನಾನು ಮಾತನಾಡಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ಶಿಕ್ಷಣದ ವಿಚಾರದಲ್ಲಿ ಏನಾದರೂ ಕೊರತೆ ಇದ್ದಿದ್ದರೆ ಸರಿಪಡಿಸಬಹುದು. ಆದರೆ ಉದ್ದೇಶ ಪೂರ್ವಕವಾಗಿ ಮಾಡುತ್ತಿರುವ ಹಿಜಾಬ್ ವಿಚಾರದಲ್ಲಿ ಯಾವುದೇ ಹೊಂದಾಣಿಕೆ ಇಲ್ಲ. ಹೆತ್ತ ತಂದೆ ತಾಯಿಗೆ ಗೌರವ ಕೊಡುವಂತೆ ಗುರುಗಳಿಗೂ ಗೌರವ ಕೊಡಬೇಕು. ಅದು ಬಿಟ್ಟು ಅನ್ಯ ಪುರುಷರು ಎನ್ನುವ ಭಾವ ಸರಿಯಲ್ಲ” ಎಂದಿದ್ದಾರೆ.

ಇನ್ನು ಸಾಕಷ್ಟು ಬಾರಿ ಶಾಸಕರು ಮತ್ತು ಶಾಲಾ ಕಾಲೇಜು ಮಂಡಳಿ ಪೋಷಕರಲ್ಲಿ ಮನವಿ ಮಾಡಿದ್ದಾರೆ. ಆನ್ ಲೈನ್ ಶಿಕ್ಷಣಕ್ಕೂ ಅವಕಾಶ ನೀಡಲಾಗಿದೆ ಆದರೂ ವಿದ್ಯಾರ್ಥಿಗಳು ತಮ್ಮ ಹಠದಿಂದ ಸವಾಲು ಹಾಕುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

15 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

37 minutes ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

43 minutes ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

1 hour ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago