Featured

ಉಡುಪಿ ಹಿಜಾಬ್ ವಿವಾದ : ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಬಿಜೆಪಿಯ ಷಡ್ಯಂತ್ರವನ್ನು ಅರಿತು ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಲು ತಮ್ಮ ಬೆಂಬಲವನ್ನು ಸೂಚಿಸಬೇಕು : SDPI ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್ – Vishwanews24

ಹಿಜಾಬ್ ವಿಷಯ ಮುಂದಿಟ್ಟು ಸೌಹಾರ್ದತೆ ಕೆಡಿಸಲು ಬಿಜೆಪಿ ಪ್ರಯತ್ನ ..

SDPI ಕುಮ್ಮಕ್ಕಿನಿಂದ ಹಿಜಾಬ್ ವಿವಾದವಾಗಿದೆ ಎನ್ನುವ ಬಾಲಿಷ ಹೇಳಿಕೆ..

ಉಡುಪಿ SDPI ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್..

ಉಡುಪಿ: ವಿದ್ಯಾರ್ಥಿನಿಯರು ತಮ್ಮ ಸಾಂವಿಧಾನಿಕ ಹಕ್ಕಾದ ಹಿಜಾಬ್ ಗಾಗಿ ಹೋರಾಟವನ್ನು ನಡೆಸುತ್ತಿರುವಾಗ ಇದನ್ನೇ ವಿವಾದ ಮಾಡಿ ಆ ಮೂಲಕ ಸಮಾಜದ ಸೌಹಾರ್ದತೆಯನ್ನು ಕೆಡಿಸಿ, ಕೋಮು ದ್ರುವೀಕರಣಗೊಳಿಸಿ ರಾಜಕೀಯ ಲಾಭ ಪಡೆಯುವ ಪ್ರಯತ್ನವನ್ನು ಬಿಜೆಪಿ ಶಾಸಕ ರಘುಪತಿ ಭಟ್ ಮಾಡುತ್ತಿದ್ದಾರೆ ಎಂದು ಉಡುಪಿ SDPI ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್ ಆರೋಪಿಸಿದ್ದಾರೆ.

ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಿ ಬಗೆಹರಿಸಬಹುದಾಗಿದ್ದ ಹಿಜಾಬ್ ವಿಷಯವನ್ನು ಬಿಜೆಪಿಯು ತನ್ನ ರಾಜಕೀಯ ಲಾಭಕ್ಕೋಸ್ಕರ ವಿವಾದಕ್ಕೀಡಾಗಿಸಿದೆ. ಹಿಜಾಬ್ ಧರಿಸಲು ಅವಕಾಶ ನೀಡಿದರೆ ಇನ್ನಿತರರು ಕೇಸರಿ ಶಾಲು ಧರಿಸುತ್ತಾರೆ, ಕೇಸರಿ ಪೇಟ ಧರಿಸುತ್ತಾರೆ, ಇವತ್ತು ಹಿಜಾಬ್ ಗೆ ಅವಕಾಶ ನೀಡಿದರೆ ನಾಳೆ ನಮಾಝ್ ಗೆ ಅವಕಾಶ ಕೇಳುತ್ತಾರೆ ಎನ್ನುವ ಅಸಂಬದ್ಧ ಹೇಳಿಕೆಯನ್ನು ನೀಡಿ ಜನರಲ್ಲಿ ಗೊಂದಲವನ್ನು ಸೃಷ್ಟಿಸಿ ಹಿಜಾಬ್ ವಿಷಯವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ವಿವಾದ ಸೃಷ್ಟಿಸಿದ್ದಾರೆ.

ಇದನ್ನೂ ಓದಿ :

ಅಲ್ಲದೇ, ಕಾಲೇಜು ಅಭಿವದ್ಧಿ ಮಂಡಳಿಯ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಹಿಜಾಬ್ ಗಾಗಿ ಹಠ ಮಾಡಿದರೆ ನಮ್ಮ ಬಳಿ ಹಿಂದೂ ಕಾರ್ಯಕರ್ತರಿದ್ದಾರೆ. ಯಾವ ರೀತಿ ಇದನ್ನು ತಡೆಯಬೇಕು ಎಂದು ತಿಳಿದಿದೆ ಎಂಬ ಬೆದರಿಕೆಯನ್ನೂ ಒಡ್ಡುತ್ತಾರೆ.ಈ ರೀತಿಯ ಕೋಮುವಾದಿ ಮನಸ್ಥಿತಿಯ ಜನರು ಸರಕಾರಿ ಕಾಲೇಜಿನ ಅಭಿವೃದ್ಧಿ ಮಂಡಳಿಯಲ್ಲಿ ಇರುವುದರಿಂದಲೇ ವಿದ್ಯಾರ್ಥಿನಿಯರು ತಮ್ಮ ಸಾಂವಿಧಾನಿಕ ಹಕ್ಕಿನಿಂದ ವಂಚಿಸಲ್ಪಡುತ್ತಿದ್ದಾರೆ.

ರಾಷ್ಟ್ರೀಯ ಮಾನವ ಹಕ್ಕು ಆಯೋಗ ವಿದ್ಯಾರ್ಥಿನಿಯರ ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿರುವುದನ್ನು ಗಮನಿಸಿ ವರದಿ ನೀಡುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ನೊಟೀಸ್ ಜಾರಿ ಮಾಡಿರುವ ಸಂದರ್ಭದಲ್ಲಿ ತೀವ್ರ ಮುಖಭಂಗಕ್ಕೀಡಾಗಿರುವ ಉಡುಪಿ ಶಾಸಕರು SDPI ಕುಮ್ಮಕ್ಕಿನಿಂದ ಹಿಜಾಬ್ ವಿವಾದವಾಗಿದೆ ಎನ್ನುವ ಬಾಲಿಷ ಹೇಳಿಕೆಯನ್ನು ನೀಡುತ್ತಿದ್ದಾರೆ. ಶಾಸಕರ ಹೇಳಿಕೆಯನ್ನು SDPI ಪಕ್ಷವು ಖಂಡಿಸುತ್ತದೆಯಲ್ಲದೇ, ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಬಿಜೆಪಿಯ ಈ ಷಡ್ಯಂತ್ರವನ್ನು ಅರಿಯಬೇಕು ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಲು ತಮ್ಮ ಬೆಂಬಲವನ್ನು ಸೂಚಿಸಬೇಕು ಎಂದು ನಝೀರ್ ಅಹ್ಮದ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago