ಉಡುಪಿ : ಜಿಜಾಬ್ ಮತ್ತು ಕೇಸರಿ ಶಾಲು ವಿವಾದದಿಂದ ಮುಚ್ಚಿದ್ದ ಎಂಜಿಎಂ ಕಾಲೇಜು ಇದೀಗ ಹತ್ತು ದಿನದ ಬಳಿಕ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಆರಂಭವಾಗಿದೆ.
ಫೆ.8ರಂದು ಎಂಜಿಎಂ ಕಾಲೇಜು ಕ್ಯಾಂಪಸ್ನಲ್ಲಿ ಜಿಜಾಬ್ ಮತ್ತು ಕೇಸರಿ ಶಾಲು ವಿವಾದ ವಿಪರೀತವಾಗಿದ್ದು, ಅಂದಿನಿಂದ ಮುಚ್ಚಿದ ಕಾಲೇಜು ಇದೀಗ ಇಂದಿನಿಂದ ಓಪನ್ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಇನ್ನು ಇಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಿದ್ದು, ದ್ವಿತೀಯ ಪಿಯುಸಿ ಕೆಮೆಸ್ಟ್ರಿ ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಎಕ್ಸಾಮ್ ನಡೆಯುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿದ ಉಡುಪಿ ಅಪರ ಪೋಲಿಸ್ ವರಿಷ್ಟಾಧಿಕಾರಿ ಸಿದ್ದಲಿಂಗಯ್ಯ, ಎಲ್ಲೆಡೆ ಶಾಂತಿಯುತವಾಗಿದ್ದು, ಸೂಕ್ತ ಪೋಲಿಸ್ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಎಂಜಿಎಂ ಕಾಲೇಜಿನಲ್ಲಿ ಕೂಡಾ ಸೂಕ್ತ ವ್ಯವಸ್ಥೆ ಮಾಡಿಕೊಂಡಿದ್ದು ಯಾವುದೇ ರೀತಿಯ ಆತಂಕ ಇಲ್ಲ ಎಂದಿದ್ದಾರೆ.
ಇನ್ನು ಇಂದಿನಿಂದ ಕಾಲೇಜು ಆರಂಭವಾಗುವ ಹಿನ್ನಲೆ ಹೆಚ್ಚುವರಿ ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಿದ್ದು, ಶಾಲಾ ಆಡಳಿತ ಮಂಡಳಿಯವರು ಸಮವಸ್ತ್ರ ನಿರ್ಧಾರ ಮಾಡಿದ್ದಾರೆ. ಬಂದಿರುವ ವಿದ್ಯಾರ್ಥಿಗಳನ್ನು ಕಾಲೇಜು ಆವರಣದೊಳಗೆ ಪ್ರವೇಶ ನೀಡಲಾಗುತ್ತಿದೆ. ಕಾಪುವಿನಲ್ಲಿ ಕೂಡಾ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…