ಉಡುಪಿ : ಜಿಜಾಬ್ ಮತ್ತು ಕೇಸರಿ ಶಾಲು ವಿವಾದದಿಂದ ಮುಚ್ಚಿದ್ದ ಎಂಜಿಎಂ ಕಾಲೇಜು ಇದೀಗ ಹತ್ತು ದಿನದ ಬಳಿಕ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಆರಂಭವಾಗಿದೆ.
ಫೆ.8ರಂದು ಎಂಜಿಎಂ ಕಾಲೇಜು ಕ್ಯಾಂಪಸ್ನಲ್ಲಿ ಜಿಜಾಬ್ ಮತ್ತು ಕೇಸರಿ ಶಾಲು ವಿವಾದ ವಿಪರೀತವಾಗಿದ್ದು, ಅಂದಿನಿಂದ ಮುಚ್ಚಿದ ಕಾಲೇಜು ಇದೀಗ ಇಂದಿನಿಂದ ಓಪನ್ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಇನ್ನು ಇಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಿದ್ದು, ದ್ವಿತೀಯ ಪಿಯುಸಿ ಕೆಮೆಸ್ಟ್ರಿ ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಎಕ್ಸಾಮ್ ನಡೆಯುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿದ ಉಡುಪಿ ಅಪರ ಪೋಲಿಸ್ ವರಿಷ್ಟಾಧಿಕಾರಿ ಸಿದ್ದಲಿಂಗಯ್ಯ, ಎಲ್ಲೆಡೆ ಶಾಂತಿಯುತವಾಗಿದ್ದು, ಸೂಕ್ತ ಪೋಲಿಸ್ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಎಂಜಿಎಂ ಕಾಲೇಜಿನಲ್ಲಿ ಕೂಡಾ ಸೂಕ್ತ ವ್ಯವಸ್ಥೆ ಮಾಡಿಕೊಂಡಿದ್ದು ಯಾವುದೇ ರೀತಿಯ ಆತಂಕ ಇಲ್ಲ ಎಂದಿದ್ದಾರೆ.
ಇನ್ನು ಇಂದಿನಿಂದ ಕಾಲೇಜು ಆರಂಭವಾಗುವ ಹಿನ್ನಲೆ ಹೆಚ್ಚುವರಿ ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಿದ್ದು, ಶಾಲಾ ಆಡಳಿತ ಮಂಡಳಿಯವರು ಸಮವಸ್ತ್ರ ನಿರ್ಧಾರ ಮಾಡಿದ್ದಾರೆ. ಬಂದಿರುವ ವಿದ್ಯಾರ್ಥಿಗಳನ್ನು ಕಾಲೇಜು ಆವರಣದೊಳಗೆ ಪ್ರವೇಶ ನೀಡಲಾಗುತ್ತಿದೆ. ಕಾಪುವಿನಲ್ಲಿ ಕೂಡಾ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…