Featured

ಉಡುಪಿ ಹಿಜಾಬ್ ವಿವಾದ : ಶಾಲಾ ಸಮವಸ್ತ್ರಕ್ಕೆ ಹೊಂದುವ ಬಣ್ಣದ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಹೈಕೋರ್ಟ್ ಗೆ ಮುಸ್ಲಿಂ ವಿದ್ಯಾರ್ಥಿಗಳಿಂದ ಮನವಿ -Vishwanews24

ಉಡುಪಿ ಹಿಜಾಬ್ ವಿವಾದ : ಶಾಲಾ ಸಮವಸ್ತ್ರಕ್ಕೆ ಹೊಂದುವ ಬಣ್ಣದ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಹೈಕೋರ್ಟ್ ಗೆ ಮುಸ್ಲಿಂ ವಿದ್ಯಾರ್ಥಿಗಳಿಂದ ಮನವಿ -Vishwanews24

ಬೆಂಗಳೂರು: ಹಿಜಾಬ್ ವಿವಾದ ಸೋಮವಾರ ಹೊಸ ತಿರುವು ಪಡೆದುಕೊಂಡಿದ್ದು, ಶಾಲಾ ಸಮವಸ್ತ್ರಕ್ಕೆ ಹೊಂದುವ ಬಣ್ಣದ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಮುಸ್ಲಿಂ ವಿದ್ಯಾರ್ಥಿಗಳು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಬಟ್ಟೆಯ ಬಳಕೆಯನ್ನು ನಿರ್ಬಂಧಿಸಿರುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ, ಹಿಜಾಬ್ ಪರವಾಗಿ ಅರ್ಜಿ ಸಲ್ಲಿಸಿರುವ ಹುಡುಗಿಯರು ಇಂದು ಕರ್ನಾಟಕ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

ಶಾಲಾ ಸಮವಸ್ತ್ರಕ್ಕೆ ಹೊಂದುವ ಬಣ್ಣದ ಹಿಜಾಬ್ ಧರಿಸಲು ಅವಕಾಶ ನೀಡಿ ಎಂದು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಜೆ ಎಂ ಖಾಜಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಂ ದೀಕ್ಷಿತ್ ಅವರನ್ನೊಳ ಗೊಂಡ ಹೈಕೋರ್ಟ್‌ನ ಪೂರ್ಣ ಪೀಠಕ್ಕೆ ಬಾಲಕಿಯರು ಮನವಿ ಮಾಡಿದ್ದಾರೆ.

ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ಪರವಾಗಿ ವಾದ ಮಂಡಿಸಿದ ವಕೀಲ ದೇವದತ್ತ್ ಕಾಮತ್ ಅವರು, ‘ನಾನು ರಾಜ್ಯ ಸರ್ಕಾರದ ಆದೇಶವನ್ನು ಮಾತ್ರ ಪ್ರಶ್ನಿಸುತ್ತಿಲ್ಲ. ಸಮವಸ್ತ್ರಕ್ಕೆ ಹೊಂದುವ ಬಣ್ಣದ ಸ್ಕಾರ್ಫ್ ಧರಿಸಲು ಅವಕಾಶ ನೀಡುವಂತೆ ಸಕಾರಾತ್ಮಕ ಆದೇಶವನ್ನು ಕೇಳುತ್ತೇನೆ ಎಂದು ಪೀಠಕ್ಕೆ ತಿಳಿಸಿದರು.

ಕೇಂದ್ರೀಯ ಶಾಲೆಗಳು ಮುಸ್ಲಿಂ ಹುಡುಗಿಯರು ಶಾಲಾ ಸಮವಸ್ತ್ರದ ಬಣ್ಣದ ಶಿರಸ್ತ್ರಾಣವನ್ನು ಧರಿಸಲು ಅನುಮತಿ ನೀಡುತ್ತವೆ ಮತ್ತು ಅದೇ ರೀತಿ ಇಲ್ಲಿಯೂ ಮಾಡಬಹುದು ಎಂದು ಕಾಮತ್ ಪ್ರತಿಪಾದಿಸಿದರು. ಮುಸ್ಲಿಂ ವಿದ್ಯಾರ್ಥಿಗಳ ಪ್ರಕಾರ ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿದೆ ಮತ್ತು ಅದರ ಬಳಕೆಯನ್ನು ನಿರ್ಬಂಧಿಸುವುದು ಭಾರತೀಯ ಸಂವಿಧಾನದ 25 ನೇ ವಿಧಿಯನ್ನು ಉಲ್ಲಂಘಿಸುತ್ತದೆ. “ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯ ಮತ್ತು ಈ ಭಾಗದ ಇತರ ನಿಬಂಧನೆಗಳಿಗೆ ಒಳಪಟ್ಟು, ಎಲ್ಲಾ ವ್ಯಕ್ತಿಗಳು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಸಮಾನವಾಗಿ ಅರ್ಹರಾಗಿದ್ದಾರೆ ಮತ್ತು ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸಲು, ಆಚರಿಸಲು ಮತ್ತು ಪ್ರಚಾರ ಮಾಡುವ ಹಕ್ಕನ್ನು ಹೊಂದಿದ್ದಾರೆ” ಎಂದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

7 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

8 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

8 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

11 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

11 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

11 hours ago