ಉಡುಪಿ: ಹಿಜಾಬ್ ಕಾರಣಕ್ಕೆ ಯಾರಾದರೂ ಶಿಕ್ಷಣ ವಂಚಿತರಾಗಿದ್ದರೆ, ನೇರವಾಗಿ ಸಿಎಫ್ಐ ಕಾರಣ ಎಂದು ಉಡುಪಿ ಶಾಸಕ ರಘುಪತಿ ಭಟ್ ತಿರುಗೇಟು ನೀಡಿದ್ದಾರೆ.
ಹಿಜಾಬ್ ಗದ್ದಲದಿಂದ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣ ವಂಚನೆ ವಿಚಾರದ ಕುರಿತು ಮಾತನಾಡಿದ ಅವರು, ಹಿಜಾಬ್ ಹೋರಾಟವನ್ನು ಪ್ರಾರಂಭ ಮಾಡಿದ್ದು ನಾವಲ್ಲ. ಹೋರಾಟವನ್ನು ಪ್ರಾರಂಭ ಮಾಡಿದ್ದು ಸಿಎಫ್ಐ. ನಮ್ಮ ಕಾಲೇಜಿನಲ್ಲಿ ಹಿಂದಿನಿಂದಲೂ ಯೂನಿಫಾರ್ಮ್ ಕೋಡ್ ಪಾಲನೆ ಆಗುತ್ತಿತ್ತು. ಕಳೆದ 20 ವರ್ಷದಿಂದ ಯೂನಿಫಾರ್ಮ್ ಕೋಡ್ ಇದ್ದ ಬಗ್ಗೆ ದಾಖಲೆ ಕೋರ್ಟಿಗೆ ಸಲ್ಲಿಸಿದ್ದೆವು. ಅದೇ ಕಾರಣಕ್ಕೆ ನಮಗೆ ಹೈಕೋರ್ಟಿನಲ್ಲಿ ಜಯ ಸಿಕ್ಕಿದೆ ಎಂದರು.
ತರಗತಿಯವರೆಗೆ ಹಿಜಾಬ್ ಧರಿಸಿ ಬಂದು ನಂತರ ಹಿಜಾದ್ ತೆಗೆದಿಟ್ಟು ಪಾಠ ಕೇಳುತ್ತಿದ್ದರು. ಸಿಎಫ್ಐಯವರು ಬಂದು ಹಿಜಾಬ್ ವಿವಾದ ಪ್ರಾರಂಭಿಸಿದರು. ಇವರಿಂದ ಹಿಜಾಬ್ ಧರಿಸಿ ಹೋಗುತ್ತಿದ್ದ ಕಾಲೇಜುಗಳಲ್ಲೂ ಸಮಸ್ಯೆ ಉಂಟಾಯ್ತು. ಆ ಕಾಲೇಜುಗಳಲ್ಲೂ ಈಗ ಹಿಜಾಬ್ ಧರಿಸಲು ಅವಕಾಶ ವಿಲ್ಲದಂತಾಗಿದ್ದು, ಹಿಜಾಬ್ ಕಾರಣಕ್ಕೆ ಯಾರಾದರೂ ಶಿಕ್ಷಣ ವಂಚಿತರಾಗಿದ್ದರೆ, ನೇರವಾಗಿ ಸಿ ಎಫ್ಐ ಕಾರಣ ಎಂದಿದ್ದಾರೆ.
ಇನ್ನು ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇವತ್ತಿಗೂ ಮುಸ್ಲಿಂ ಹೆಣ್ಣು ಮಕ್ಕಳು ವಿದ್ಯಾಭ್ಯಾಸಕ್ಕೆ ಬರುತ್ತಿದ್ದಾರೆ. ಪ್ರತಿಭಾನ್ವಿತ ಮುಸ್ಲಿಂ ಹೆಣ್ಣು ಮಕ್ಕಳಿಗೆ ನಾವು ಸನ್ಮಾನ ಮಾಡಿದ್ದೇವೆ. ಕಳೆದ ವರ್ಷಕ್ಕಿಂತ ಜಾಸ್ತಿ ಮುಸ್ಲಿಂ ಹೆಣ್ಣು ಮಕ್ಕಳು ಈ ಬಾರಿ ಅಡ್ಮಿಶನ್ ಪಡೆದಿದ್ದಾರೆ. ಇದು ಕೇವಲ ಸಿಎಫ್ಐ ಮಾಡಿರುವ ಸೃಷ್ಟಿ. ವಿದ್ಯಾಭ್ಯಾಸ ಬೇಕು ಎನ್ನುವ ಹೆಣ್ಣು ಮಕ್ಕಳು ಕಲಿಯುತ್ತಿದ್ದಾರೆ. ಧರ್ಮದ ಅಂದತೆ ಸೃಷ್ಟಿಸುವವರು ಸೃಷ್ಟಿಸ್ತಾ ಇದ್ದಾರೆ. ವಿದ್ಯಾಭ್ಯಾಸ ಬೇಕು ಎನ್ನುವ ಎಲ್ಲ ಹೆಣ್ಣು ಮಕ್ಕಳು ಯುನಿಫಾರ್ಮ್ ಕೋಡ್ ಪಾಲಿಸಿ ಶಿಕ್ಷಣ ಪಡೆಯುತ್ತಿದ್ದಾರೆ. ನಾವು ಕಡ್ಡಾಯ ಮಾಡಿದ್ದು ಯುನಿಫಾರ್ಮ್ ಕೋಡ್, ಹಿಜಾಬ್ ವಿವಾದ ಆರಂಭಿಸಿದ್ದು ಸಿಎಫ್ಐ ಎಂದು ಹೇಳಿದ್ದಾರೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…