Featured

ಉಡುಪಿ : ಹಿರಿಯ ಪೊಲೀಸ್ ಅಧಿಕಾರಿಯೊಂದಿಗೆ ದುರ್ವರ್ತನೆ ತೋರಿದ ಶಾಸಕರಾದ ಸುನೀಲ್ ಕುಮಾರ್ ನಡೆ ನಾಚೀಕೆಗೇಡು : ರಮೇಶ್ ಕಾಂಚನ್ ಆಕ್ರೋಶ – vishwanews24

ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ. ನಾವು ಪ್ರಜಾಪ್ರಭುತ್ವದ ಅಡಿಯಲ್ಲಿ ಸಂವಿಧಾನ ಗೌರವಿಸಿ ಕೆಲಸ ಮಾಡುತ್ತಿದ್ದೇವೆ : ರಮೇಶ್ ಕಾಂಚನ್

ಉಡುಪಿ: ಜಿಲ್ಲೆಯ ಅಭಿವೃದ್ದಿಗಳ ಬಗ್ಗೆ ಗಂಭೀರ ಚರ್ಚೆ ಮಾಡಬೇಕಾದ ಕೆ.ಡಿ.ಪಿ ಸಭೆಯಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯಡಿಯಲ್ಲಿ ಜವಬ್ದಾರಿಯುತ ಸ್ಥಾನದಲ್ಲಿರುವ ಕಾರ್ಕಳದ ಶಾಸಕರಾದ ಸುನೀಲ್ ಕುಮಾರ್ ಅವರು ಕೀಳು ಮಟ್ಟದ ಸಂಭಾಷಣೆಗಳನ್ನು ಬಳಸಿ ಜಿಲ್ಲೆಯ ಓರ್ವ ನಿಷ್ಟಾವಂತ ಪೊಲೀಸ್ ಅಧಿಕಾರಿಯೊಬ್ಬರ ಜೊತೆ ನಡೆದುಕೊಂಡಿರುವ ಅಸಭ್ಯ ವರ್ತನೆ ಇಡೀ ಜಿಲ್ಲೆಯ ಜನ ತಲೆತಗ್ಗಿಸುವಂತಾಗಿದೆ. ಹಿರಿಯ ಪೊಲೀಸ್ ಅಧಿಕಾರಿಯೊಂದಿಗೆ ದುರವರ್ತನೆ ತೋರಿದ ಶಾಸಕರ ನಡೆ ನಾಚೀಕೆಗೇಡು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಕ್ರೋಶದುವರ್ತನೆ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು, ಉನ್ನತ ಅಧಿಕಾರಿಗಳು ಸೇರಿರುವ ಕೆ.ಡಿ.ಪಿ ಸಭೆಯಲ್ಲಿ ತನ್ನನ್ನು ಗೆಲ್ಲಿಸಿರುವ ಕ್ಷೇತ್ರದ ಅಭಿವೃದ್ದಿ ಬಗ್ಗೆ ಮಾತನಾಡ ಬೇಕಾಗಿತ್ತು. ಅದನ್ನ ಬಿಟ್ಟು ಅಧಿಕಾರಿಗಳ ಜೊತೆ ತಾನೊಬ್ಬ ಜವಾಬ್ದಾರಿಯುತ ಜನಪ್ರತಿನಿಧಿ ಎನ್ನುವುದನ್ನು ಮರೆತು ಅನಾಗರಿಕರಂತೆ ವರ್ತಿಸಿರುವುದು ಖಂಡನೀಯವಾಗಿದೆ.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕಡು ಭ್ರಷ್ಟತೆಯಲ್ಲಿ ತೊಡಗಿ ದರ್ಪ, ಅಹಂಕಾರದಿಂದ ಮೆರೆದು ಅಧಿಕಾರ ಕಳೆದುಕೊಂಡರು ಇವರಿಗೆ ಇನ್ನೂ ಬುದ್ದಿ ಬಂದಿಲ್ಲ. ತಮ್ಮ ಆಡಳಿತವಧಿಯಲ್ಲಿ ಇಡೀ ಜಿಲ್ಲೆಯಲ್ಲೇ ಅಧಿಕಾರಿಗಳನ್ನು ಹೆದರಿಸಿ, ಬೆದರಿಸಿ ತಮ್ಮ ಕಾನೂನು ಬಾಹಿರ ಚಟುವಟಿಕೆಗಳನ್ನು ರಾಜಾರೋಷವಾಗಿ ಮಾಡಿಸಿಕೊಳ್ಳುತ್ತಿದ್ದ ಬಿಜಿಪಿ ಶಾಸಕರಿಗೆ ಇಂದು ಕಾನೂನು, ಕಟ್ಟಳೆಗಳನ್ನು ಅನುಸರಿಸುವುದು ಕಷ್ಟವಾಗುತ್ತಿದ್ದಂತಿದೆ ಎನ್ನುವುದರ ಉದಾಹರಣೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಡೆದುಕೊಂಡ ರೀತಿಯನ್ನು ತೋರಿಸುತ್ತದೆ.

ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ಮಾಡುವಾಗ ಅಧಿಕಾರಿಗಳು ಇವರ ತಾಳಕ್ಕೆ ಕುಣಿಯಲಿಲ್ಲ ಎಂದಾಗ ಅವರನ್ನು ಹೀನಾಯವಾಗಿ ಬೈದು, ಬೆದರಿಸಿ ಬೋಗಸ್ ಪ್ರತಿಮೆಯನ್ನು ಸ್ಥಾಪಿಸಿದರು. ಅದೇ ರೀತಿ ಕಾಂಗ್ರೆಸ್ ಸರ್ಕಾರದಲ್ಲೂ ಜಿಲ್ಲೆಯಲ್ಲಿನ ಪ್ರಾಮಾಣಿಕ ಅಧಿಕಾರಿಗಳು ಇವರ ಕಾನೂನು ಬಾಹಿರ ಚಟುವಟಿಕೆಗಳಿಗೆ ಸಹಕರಿಸುತ್ತಿಲ್ಲ ಎಂದು ಪ್ರಾಮಾಣಿಕ ಅಧಿಕಾರಿಗಳನ್ನು ಕೆ.ಡಿ.ಪಿಯಂತಹ ಅಭಿವೃದ್ಧಿ ಪರ ಚಿಂತನೆ ಮಾಡಬೇಕಾದ ಸಭೆಗಳಲ್ಲಿ ಅನಗತ್ಯವಾಗಿ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಹೆದರಿಸಿ ಬೆದರಿಸುವ ತಂತ್ರಕ್ಕೆ ಮೊರೆಹೋಗಿರುವುದು ಶಾಸಕರ ಘನತೆಗೆ ಸರಿಯಾದದ್ದಲ್ಲ.

ಬಿಜೆಪಿ ಹಿಂದುತ್ವದ ಪಕ್ಷ ಎಂದುಕೊಂಡೇ ಪ್ರಖರ ಹಿಂದೂತ್ವವಾದಿ ಪ್ರಮೋದ್ ಮುತಾಲಿಕ್ ಅವರು ಪ್ರತಿಭಟನೆಗೆ ಬರುವಾಗ ಅವರನ್ನು ಉಡುಪಿಗೆ ಪ್ರವೇಶ ಮಾಡದಂತೆ ನಿರ್ಬಂಧ ಹೇರಿದ ಬಿಜೆಪಿಯ ಶಾಸಕರು ಈಗ ಯಾವ ಮುಖವಿಟ್ಟು ಹೇಗೆ ಪ್ರತಿಭಟನೆ ಮಾಡಬೇಕು ಎಂದು ಕಾಂಗ್ರೆಸ್ ಸರಕಾರ ಗೈಡ್ ಲೈನ್ಸ್ ಹೊರಡಿಸಬೇಕು ಎಂದು ಕೇಳುತ್ತಿದ್ದೀರಿ ?

ಈ ಹಿಂದೆ ದೆಹಲಿಯಲ್ಲಿ ಪ್ರತಿಭಟನೆ ಮಾಡಿದ ರೈತರ ಮೇಲೆ ಕಾರು ಹತ್ತಿಸಿದ ನಿಮ್ಮ ಪಕ್ಷದವನನ್ನು ಏನೂ ಮಾಡಿದಿರಿ ? ಪ್ರತಿಭಟನೆ ಮಾಡಿದ ಕುಸ್ತಿ ಪಟುಗಳನ್ನು ಏನು ಮಾಡಿದಿರಿ ಅಂತ ಜಗತ್ತಿಗೆ ತಿಳಿದಿದೆ. ಇಲ್ಲಿ ಮಾತ್ರ ನಿಮಗೆ ಪ್ರಜಾಪ್ರಭುತ್ವ ನೆನಪಾಗುವುದಾ ? ನಿಮ್ಮ ಉತ್ತರ ಪ್ರದೇಶದಲ್ಲಿ ಮಾತಾಡಿದವರ ಮನೆಗೆ ಬುಲ್‌ಡೋಜರ್ ನುಗ್ಗಿಸಿದ ನಿಮಗೆ ಪ್ರಜಾಪ್ರಭುತ್ವದ ಬಗ್ಗೆ ಮಾತಾಡುವ ನೈತಿಕ ಹಕ್ಕಿದೆಯಾ ?

ಶಾಸಕರೇ ಪ್ರಸ್ತುತ ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ. ನಾವು ಪ್ರಜಾಪ್ರಭುತ್ವದ ಅಡಿಯಲ್ಲಿ ಸಂವಿಧಾನ ಗೌರವಿಸಿ ಕೆಲಸ ಮಾಡುತ್ತಿದ್ದೇವೆ. ಪ್ರತಿಭಟನೆ ಹೇಗೆ ಮಾಡಬೇಕೆಂದು ನಮಗೆ ಗೊತ್ತಿದೆ ಆದರೆ ನಿಮ್ಮಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ನಾವು ಅಧಿಕಾರಿಗಳನ್ನು ಬಳಸಿಕೊಳ್ಳುವುದಿಲ್ಲ. ನಿಮ್ಮ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳನ್ನು ಹೇಗೆ ನಡಿಸಿಕೊಂಡಿದ್ದೀರಿ ಎಂಬುದನ್ನು ಎಲ್ಲರಿಗೂ ಗೊತ್ತಿದೆ. ನಾವು ಇಂದಿಗೂ ಪ್ರಾಮಾಣಿಕ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಬಂದಿಲ್ಲ. ಅದೆಲ್ಲಾ ನಿಮ್ಮ ಚಾಳಿ ಅವರ ಕೆಲಸವನ್ನು ಮಾಡಲು ಬಿಡದೆ ಬೆದರಿಕೆ ಒಡ್ಡುವುದು ನಿಮ್ಮ ಜಾಯಮಾನವಾಗಿದೆ. ಜಿಲ್ಲೆಯ ದಕ್ಷ ಪೊಲೀಸ್ ವರಿಷ್ಠಾಧಿಕಾರಿ ಸಹಿತ ಎಲ್ಲಾ ಇತರ ದಕ್ಷ ಅಧಿಕಾರಿಗಳೊಂದಿಗೆ ಇಡೀ ಉಡುಪಿ ಜಿಲ್ಲೆಯ ಜನರು ಬೆನ್ನೆಲುಬಾಗಿ ನಿಂತಿದ್ದಾರೆ ಎನ್ನುವುದನ್ನು ಅರಿತು ಅಭಿವೃದ್ಧಿಪರಿ ಜಿಲ್ಲೆಯಾಗಲು ಸಹಕಾರ ನೀಡುವ ಕೆಲಸ ಕಾರ್ಕಳದ ಶಾಸಕರಾದ ಸುನೀಲ್ ಕುಮಾರ್ ಅವರು ಮಾಡಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

5 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

6 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

8 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

8 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

9 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

9 hours ago