ಉಡುಪಿ : ಯು.ಟಿ ಖಾದರ್ ಭೇಟಿಯ ಬಳಿಕ ಹುತಾತ್ಮ ಯೋಧ ಅನೂಪ್ ಪೂಜಾರಿ ಅವರ ಪತ್ನಿ ಹಾಗೂ ಕುಟುಂಬಿಕರನ್ನು ಭೇಟಿ ಮಾಡಿ ಸಾಂತ್ವಾನ ತಿಳಿಸಿದ ಉಡುಪಿ ಶಾಸಕ ಯಶಪಾಲ್ ಸುವರ್ಣ ತಮ್ಮ ವಯಕ್ತಿಕ 1 ಲಕ್ಷ ರೂ. ಚೆಕ್ ನೀಡಿ ಅನೂಪ್ ಅವರ ಪುತ್ರಿ ಇಶಾನಿ ಅವರ ಹೆಸರಿನಲ್ಲಿ ನಿಖರ ಠೇವಣೆ ಇಡುವಂತೆ ಹೇಳಿದರು.
ಬಳಿಕ ಸುದ್ದಿಗಾರರೊದಿಗೆ ಮಾತನಾಡಿದ ಅವರು, ಅನೂಪ್ ಅವರ ನಿಧನ ಕರಾವಳಿಯ ಜನರಿಗೆ ಅತೀವ ದುಃಖವನ್ನು ತಂದಿದೆ. ಸೈನ್ಯಕ್ಕೆ ಸೇರುವ ಯುವಕರಿಗೆ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಅಕಾಡೆಮಿಯೊಂದನ್ನು ಹುಟ್ಟುಹಾಕಬೇಕು ಎನ್ನುವ ಕನಸುಗಳು ಅನೂಪ್ ಪೂಜಾರಿ ಅವರಿಗಿತ್ತು ಎನ್ನುವುದನ್ನು ಸ್ಥಳೀಯರು ತಿಳಿಸಿದ್ದಾರೆ. ಅವರ ಕನಸನ್ನು ನನಸು ಮಾಡಲು ಯಾವುದೇ ಸಲಹೆ ಹಾಗೂ ಸಹಕಾರಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಪ್ರಮುಖರು ಒಟ್ಟಾಗಿ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಸ್ಥಳಿಯ ಪ್ರಮುಖರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಬಿ.ಹಿರಿಯಣ್ಣ ಚಾತ್ರಬೆಟ್ಟು, ಮಲ್ಯಾಡಿ ಶಿವರಾಮ್ ಶೆಟ್ಟಿ, ಅಶೋಕ ಪೂಜಾರಿ ಬೀಜಾಡಿ, ಪ್ರಕಾಶ್ ಪೂಜಾರಿ ಬೀಜಾಡಿ, ಅವಿನಾಶ್ ಉಳ್ತೂರು, ಶೇಖರ ಚಾತ್ರಬೆಟ್ಟು, ಸದಾನಂದ ಶೆಟ್ಟಿ ಕೆದೂರು, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಸುರೇಂದ್ರ ಶೆಟ್ಟಿ ಸಹನಾ, ಯಾಸಿನ್ ಹೆಮ್ಮಾಡಿ, ಅನಿಲ್ ಚಾತ್ರಬೆಟ್ಟು, ಜಸಿಂತಾ ಡಿಮೆಲ್ಲೋ, ಎನ್ಎಸ್ಯುಐ ಮುಖಂಡ ಸಯ್ಯದ್ ಫುರ್ಖಾನ್ ಮುಂತಾದವರಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…