ಉಡುಪಿ : ಯು.ಟಿ ಖಾದರ್ ಭೇಟಿಯ ಬಳಿಕ ಹುತಾತ್ಮ ಯೋಧ ಅನೂಪ್ ಪೂಜಾರಿ ಅವರ ಪತ್ನಿ ಹಾಗೂ ಕುಟುಂಬಿಕರನ್ನು ಭೇಟಿ ಮಾಡಿ ಸಾಂತ್ವಾನ ತಿಳಿಸಿದ ಉಡುಪಿ ಶಾಸಕ ಯಶಪಾಲ್ ಸುವರ್ಣ ತಮ್ಮ ವಯಕ್ತಿಕ 1 ಲಕ್ಷ ರೂ. ಚೆಕ್ ನೀಡಿ ಅನೂಪ್ ಅವರ ಪುತ್ರಿ ಇಶಾನಿ ಅವರ ಹೆಸರಿನಲ್ಲಿ ನಿಖರ ಠೇವಣೆ ಇಡುವಂತೆ ಹೇಳಿದರು.
ಬಳಿಕ ಸುದ್ದಿಗಾರರೊದಿಗೆ ಮಾತನಾಡಿದ ಅವರು, ಅನೂಪ್ ಅವರ ನಿಧನ ಕರಾವಳಿಯ ಜನರಿಗೆ ಅತೀವ ದುಃಖವನ್ನು ತಂದಿದೆ. ಸೈನ್ಯಕ್ಕೆ ಸೇರುವ ಯುವಕರಿಗೆ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಅಕಾಡೆಮಿಯೊಂದನ್ನು ಹುಟ್ಟುಹಾಕಬೇಕು ಎನ್ನುವ ಕನಸುಗಳು ಅನೂಪ್ ಪೂಜಾರಿ ಅವರಿಗಿತ್ತು ಎನ್ನುವುದನ್ನು ಸ್ಥಳೀಯರು ತಿಳಿಸಿದ್ದಾರೆ. ಅವರ ಕನಸನ್ನು ನನಸು ಮಾಡಲು ಯಾವುದೇ ಸಲಹೆ ಹಾಗೂ ಸಹಕಾರಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಪ್ರಮುಖರು ಒಟ್ಟಾಗಿ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಸ್ಥಳಿಯ ಪ್ರಮುಖರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಬಿ.ಹಿರಿಯಣ್ಣ ಚಾತ್ರಬೆಟ್ಟು, ಮಲ್ಯಾಡಿ ಶಿವರಾಮ್ ಶೆಟ್ಟಿ, ಅಶೋಕ ಪೂಜಾರಿ ಬೀಜಾಡಿ, ಪ್ರಕಾಶ್ ಪೂಜಾರಿ ಬೀಜಾಡಿ, ಅವಿನಾಶ್ ಉಳ್ತೂರು, ಶೇಖರ ಚಾತ್ರಬೆಟ್ಟು, ಸದಾನಂದ ಶೆಟ್ಟಿ ಕೆದೂರು, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಸುರೇಂದ್ರ ಶೆಟ್ಟಿ ಸಹನಾ, ಯಾಸಿನ್ ಹೆಮ್ಮಾಡಿ, ಅನಿಲ್ ಚಾತ್ರಬೆಟ್ಟು, ಜಸಿಂತಾ ಡಿಮೆಲ್ಲೋ, ಎನ್ಎಸ್ಯುಐ ಮುಖಂಡ ಸಯ್ಯದ್ ಫುರ್ಖಾನ್ ಮುಂತಾದವರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…