Featured

ಉಡುಪಿ : ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಭೇಟಿ ನೀಡಿ ವೈಯಕ್ತಿಕ 1 ಲಕ್ಷ ರೂ. ಸಹಾಯ ನೀಡಿದ ಯಶ್ಪಾಲ್ ಸುವರ್ಣ – vishwanews24

ಉಡುಪಿ : ಅನೂಪ್‌ ಕನಸು ನನಸಾಗಿಸಲು ಒಟ್ಟಾಗಿ ಪ್ರಯತ್ನ ಮಾಡುತ್ತೇವೆ: ಯಶ್ಪಾಲ್ ಸುವರ್ಣ

 ಉಡುಪಿ : ಯು.ಟಿ ಖಾದರ್ ಭೇಟಿಯ ಬಳಿಕ ಹುತಾತ್ಮ ಯೋಧ ಅನೂಪ್ ಪೂಜಾರಿ ಅವರ ಪತ್ನಿ ಹಾಗೂ ಕುಟುಂಬಿಕರನ್ನು ಭೇಟಿ ಮಾಡಿ ಸಾಂತ್ವಾನ‌ ತಿಳಿಸಿದ ಉಡುಪಿ ಶಾಸಕ ಯಶಪಾಲ್ ಸುವರ್ಣ ತಮ್ಮ ವಯಕ್ತಿಕ 1 ಲಕ್ಷ ರೂ. ಚೆಕ್ ನೀಡಿ ಅನೂಪ್ ಅವರ ಪುತ್ರಿ ಇಶಾನಿ ಅವರ ಹೆಸರಿನಲ್ಲಿ ನಿಖರ ಠೇವಣೆ ಇಡುವಂತೆ ಹೇಳಿದರು.

ಬಳಿಕ ಸುದ್ದಿಗಾರರೊದಿಗೆ ಮಾತನಾಡಿದ ಅವರು, ಅನೂಪ್ ಅವರ ನಿಧನ ಕರಾವಳಿಯ ಜನರಿಗೆ ಅತೀವ ದುಃಖವನ್ನು ತಂದಿದೆ. ಸೈನ್ಯಕ್ಕೆ ಸೇರುವ ಯುವಕರಿಗೆ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಅಕಾಡೆಮಿಯೊಂದನ್ನು ಹುಟ್ಟುಹಾಕಬೇಕು ಎನ್ನುವ ಕನಸುಗಳು ಅನೂಪ್ ಪೂಜಾರಿ ಅವರಿಗಿತ್ತು ಎನ್ನುವುದನ್ನು ಸ್ಥಳೀಯರು ತಿಳಿಸಿದ್ದಾರೆ. ಅವರ ಕನಸನ್ನು ನನಸು ಮಾಡಲು ಯಾವುದೇ ಸಲಹೆ ಹಾಗೂ ಸಹಕಾರಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಪ್ರಮುಖರು ಒಟ್ಟಾಗಿ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಸ್ಥಳಿಯ ಪ್ರಮುಖರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಬಿ.ಹಿರಿಯಣ್ಣ ಚಾತ್ರಬೆಟ್ಟು, ಮಲ್ಯಾಡಿ ಶಿವರಾಮ್ ಶೆಟ್ಟಿ, ಅಶೋಕ ಪೂಜಾರಿ ಬೀಜಾಡಿ, ಪ್ರಕಾಶ್ ಪೂಜಾರಿ ಬೀಜಾಡಿ, ಅವಿನಾಶ್ ಉಳ್ತೂರು, ಶೇಖರ ಚಾತ್ರಬೆಟ್ಟು, ಸದಾನಂದ ಶೆಟ್ಟಿ ಕೆದೂರು, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಸುರೇಂದ್ರ ಶೆಟ್ಟಿ ಸಹನಾ, ಯಾಸಿನ್ ಹೆಮ್ಮಾಡಿ, ಅನಿಲ್ ಚಾತ್ರಬೆಟ್ಟು, ಜಸಿಂತಾ ಡಿಮೆಲ್ಲೋ, ಎನ್ಎಸ್ಯುಐ ಮುಖಂಡ ಸಯ್ಯದ್ ಫುರ್ಖಾನ್ ಮುಂತಾದವರಿದ್ದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

8 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

8 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

9 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

9 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

13 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

13 hours ago