ಕೋಟೇಶ್ವರ: ಸ್ಪೀಕರ್ ಯು.ಟಿ.ಖಾದರ್ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಡಿ.27ರಂದು ರಾತ್ರಿ ಬೀಜಾಡಿಯಲ್ಲಿರುವ ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ತೆರಳಿ ಮೃತರ ತಾಯಿ ಚಂದು ಪೂಜಾರಿ, ಪತ್ನಿ ಮಂಜುಶ್ರೀ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭ ಮಾತನಾಡಿದ ಖಾದರ್, ಅನೂಪ್ ಪೂಜಾರಿ ಬಗ್ಗೆ ಮುಖ್ಯಮಂತ್ರಿಗಳ ಜತೆಗೆ ಮಾತನಾಡಿದ್ದು, ಸರಕಾರದಿಂದ ಒದಗಿಸಬಹುದಾದ ಸವಲತ್ತು ಹಾಗೂ ಪರಿಹಾರ ನೀಡು ವುದಾಗಿ ಹೇಳಿದರು. ಮೃತರ ಪತ್ನಿ ಪದವೀಧರೆಯಾಗಿದ್ದು, ಅವರಿಗೆ ಸರಕಾರ ಕೆಲಸ ಕೊಡಿಸಬೇಕು ಎಂದು ಕುಂದಾಪುರ ಬಿಲ್ಲವ ಸಮಾಜದ ಅಧ್ಯಕ್ಷ ಅಶೋಕ ಪೂಜಾರಿ ಮನವಿ ಮಾಡಿದರು. ಈ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಖಾದರ್ ಹೇಳಿದರು.
ಮಾಜಿ ಸಚಿವ ವಿನಯಕುಮಾರ ಸೊರಕೆ, ದಿನೇಶ್ ಹೆಗ್ಡೆ ಮೊಳಹಳ್ಳಿ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಒಟ್ಟಾಗಿ ಪ್ರಯತ್ನ ನಡೆಸುವುದಾಗಿ ತಿಳಿಸಿದ ಅವರು, ಹುತಾತ್ಮ ಯೋಧನ ಹೆಸನಲ್ಲಿ ಸ್ಮಾರಕ ನಿರ್ಮಾಣವೂ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ರೂಪಿಸುವುದಿದ್ದರೂ, ಸ್ಥಳೀಯ ಆಡಳಿತ ತೀರ್ಮಾನ ಕೈಗೊಳ್ಳಲಿ ಆ ಬಳಿಕ ಸರ್ಕಾರದಿಂದ ಬೇಕಾದ ಸಹಕಾರ ನೀಡಲು ಬದ್ಧರಿರುವುದಾಗಿ ತಿಳಿಸಿದರು.
ದಿನೇಶ ಶೆಟ್ಟಿ ಮೊಳಹಳ್ಳಿ, ಮಲ್ಯಾಡಿ ಶಿವರಾಮ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.
ಸ್ಮಾರಕ ರಚನೆಗೆ ಸಹಕಾರ: ಬೀಜಾಡಿ ಕಡಲ ತೀರದಲ್ಲಿ ಅನೂಪ್ ಪೂಜಾರಿ ಅವರ ಸ್ಮಾರಕ ನಿರ್ಮಿಸಲು ಸಹಕಾರ ನೀಡುವುದಾಗಿ ಖಾದರ್ ಹೇಳಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…