ಕೋಟೇಶ್ವರ: ಸ್ಪೀಕರ್ ಯು.ಟಿ.ಖಾದರ್ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಡಿ.27ರಂದು ರಾತ್ರಿ ಬೀಜಾಡಿಯಲ್ಲಿರುವ ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ತೆರಳಿ ಮೃತರ ತಾಯಿ ಚಂದು ಪೂಜಾರಿ, ಪತ್ನಿ ಮಂಜುಶ್ರೀ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭ ಮಾತನಾಡಿದ ಖಾದರ್, ಅನೂಪ್ ಪೂಜಾರಿ ಬಗ್ಗೆ ಮುಖ್ಯಮಂತ್ರಿಗಳ ಜತೆಗೆ ಮಾತನಾಡಿದ್ದು, ಸರಕಾರದಿಂದ ಒದಗಿಸಬಹುದಾದ ಸವಲತ್ತು ಹಾಗೂ ಪರಿಹಾರ ನೀಡು ವುದಾಗಿ ಹೇಳಿದರು. ಮೃತರ ಪತ್ನಿ ಪದವೀಧರೆಯಾಗಿದ್ದು, ಅವರಿಗೆ ಸರಕಾರ ಕೆಲಸ ಕೊಡಿಸಬೇಕು ಎಂದು ಕುಂದಾಪುರ ಬಿಲ್ಲವ ಸಮಾಜದ ಅಧ್ಯಕ್ಷ ಅಶೋಕ ಪೂಜಾರಿ ಮನವಿ ಮಾಡಿದರು. ಈ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಖಾದರ್ ಹೇಳಿದರು.
ಮಾಜಿ ಸಚಿವ ವಿನಯಕುಮಾರ ಸೊರಕೆ, ದಿನೇಶ್ ಹೆಗ್ಡೆ ಮೊಳಹಳ್ಳಿ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಒಟ್ಟಾಗಿ ಪ್ರಯತ್ನ ನಡೆಸುವುದಾಗಿ ತಿಳಿಸಿದ ಅವರು, ಹುತಾತ್ಮ ಯೋಧನ ಹೆಸನಲ್ಲಿ ಸ್ಮಾರಕ ನಿರ್ಮಾಣವೂ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ರೂಪಿಸುವುದಿದ್ದರೂ, ಸ್ಥಳೀಯ ಆಡಳಿತ ತೀರ್ಮಾನ ಕೈಗೊಳ್ಳಲಿ ಆ ಬಳಿಕ ಸರ್ಕಾರದಿಂದ ಬೇಕಾದ ಸಹಕಾರ ನೀಡಲು ಬದ್ಧರಿರುವುದಾಗಿ ತಿಳಿಸಿದರು.
ದಿನೇಶ ಶೆಟ್ಟಿ ಮೊಳಹಳ್ಳಿ, ಮಲ್ಯಾಡಿ ಶಿವರಾಮ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.
ಸ್ಮಾರಕ ರಚನೆಗೆ ಸಹಕಾರ: ಬೀಜಾಡಿ ಕಡಲ ತೀರದಲ್ಲಿ ಅನೂಪ್ ಪೂಜಾರಿ ಅವರ ಸ್ಮಾರಕ ನಿರ್ಮಿಸಲು ಸಹಕಾರ ನೀಡುವುದಾಗಿ ಖಾದರ್ ಹೇಳಿದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…