Featured

ಉಡುಪಿ: ಹೆಜಮಾಡಿಯಲ್ಲಿ ಹೆಚ್ಚುವರಿ ಟೋಲ್ ಸುಂಕ ಸಂಗ್ರಹಿಸದಂತೆ ಜಿಲ್ಲಾಧಿಕಾರಿಗೆ ಹೋರಾಟ ಸಮಿತಿ ಮನವಿ – Vishwanews24

ಉಡುಪಿ: ಹೆಜಮಾಡಿಯಲ್ಲಿ ಹೆಚ್ಚುವರಿ ಟೋಲ್ ಸುಂಕ ಸಂಗ್ರಹಿಸದಂತೆ ಜಿಲ್ಲಾಧಿಕಾರಿಗೆ ಹೋರಾಟ ಸಮಿತಿ ಮನವಿ

ಉಡುಪಿ: ಹೆಜಮಾಡಿ ಟೋಲ್ ಫ್ಲಾಝಾದಲ್ಲಿ ಸುರತ್ಕಲ್ ಟೋಲ್ ನ ಸುಂಕ ಸಂಗ್ರಹಕ್ಕೆ ಅವಕಾಶ ನೀಡಬಾರದು ಹಾಗೂ ತಕ್ಷಣವೇ ಜಿಲ್ಲಾಡಳಿತದ ಸಭೆ ನಡೆಸಬೇಕೆಂದು ಒತ್ತಾಯಿಸಿ ಉಡುಪಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗ ಶನಿವಾರ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.

ಸುರತ್ಕಲ್ ಟೋಲ್ ಗೇಟ್ ನಲ್ಲಿ ಸಂಗ್ರಹಿಸುತ್ತಿದ್ದ ಸುಂಕವನ್ನು ಇನ್ನು ಮುಂದೆ ಹೆಜಮಾಡಿಯ ಟೋಲ್ ಕೇಂದ್ರದಲ್ಲಿ ಸಂಗ್ರಹಿಸಲು ಆದೇಶ ಹೊರಡಿಸಿರುವುದು ಆತಂಕಕಾರಿಯಾಗಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹೆಜಮಾಡಿಯ ನವಯುಗ್ ಟೋಲ್ ಗೇಟ್ ನಲ್ಲಿ ಸುರತ್ಕಲ್ ಟೋಲ್ ಸಂಗ್ರಹದ ಆದೇಶ ಜಾರಿಯಾದಲ್ಲಿ ಎರಡೂ ಜಿಲ್ಲೆಯ ಜನರಿಗೆ ತೊಂದರೆ ಯಾಗಲಿದೆ. ಅದರಲ್ಲೂ ಉಡುಪಿ ಜಿಲ್ಲೆಯ ಜನರ ಮೇಲೆ ಸುಂಕದ ಭಾರ ಅತ್ಯಂತ ಹೆಚ್ಚು ಭಾದಿಸಲಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಪಡುಬಿದ್ರೆಯಿಂದ ಮೂಲ್ಕಿಯ ಆರು ಕಿ.ಮೀ. ಏಕ ಮುಖ ಪ್ರಯಾಣಕ್ಕೆ ಕಾರಿನಲ್ಲಿ 100 ರೂ. ಪಾವತಿಸಬೇಕಾಗುತ್ತದೆ. ಇನ್ನು ಸ್ಥಳೀಯ ಕೆಂಪು ಕಲ್ಲು, ಜಲ್ಲಿ ಮುಂತಾದ ನಿರ್ಮಾಣ ಸಾಮಗ್ರಿಗಳನ್ನು ಸುರತ್ಕಲ್, ಪಡುಬಿದ್ರೆ, ಕಾಪು, ಕಾರ್ಕಳ ಮಧ್ಯೆ ದಿನ ನಿತ್ಯ ಸಾಗಾಟ ಮಾಡುವ ವಾಹನಗಳ ಮೇಲೆ ಬೀಳುವ ದುಬಾರಿ ಟೋಲ್ ಸಾಮಾನ್ಯ ಜನರಿಗೆ ದೊಡ್ಡ ಹೊಡೆತ ಬೀಳಲಿದೆ. ಜನರ ದುಡಿಮೆಯ ಬಹುಪಾಲು ಟೋಲ್ಗೇಟ್ಗಳು ಕಬಳಿಸಿದಲ್ಲಿ ಅವರ ಬದುಕಿನ ಮೇಲೂ ದೊಡ್ಡ ಪರಿಣಾಮ ಆಗಲಿದೆ ಎಂದು ನಿಯೋಗ ದೂರಿದೆ.

ಜಿಲ್ಲಾಡಳಿತ ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಹೆದ್ದಾರಿ ಪ್ರಾಧಿಕಾರದ ಆದೇಶ ತಕ್ಷಣಕ್ಕೆ ಜಾರಿಗೆ ಅವಕಾಶ ನೀಡಬಾರದು. ಆದಷ್ಟು ಬೇಗ ಜನಪ್ರತಿ ನಿಧಿಗಳು, ಉಸ್ತುವಾರಿ ಸಚಿವರನ್ನು ಒಳಗೊಂಡ ಜಿಲ್ಲಾಡಳಿತದ ಸಭೆಯನ್ನು ಕರೆದು ಚರ್ಚೆಯನ್ನು ನಡೆಸಬೇಕು. ಆದೇಶದಲ್ಲಿರುವ ನ್ಯೂನತೆಗಳು, ಆದೇಶ ಜಾರಿಯಾದಲ್ಲಿ ಉಂಟಾಗುವ ಪರಿಣಾಮಗಳನ್ನು ಸರಕಾರಕ್ಕೆ ವಿವರಿಸಿ ಹೆಜಮಾಡಿ ಟೋಲ್ ಫ್ಲಾಝಾದಲ್ಲಿ ಸುರತ್ಕಲ್ ಟೋಲ್ ಸಂಗ್ರಹದ ಆದೇಶ ಹಿಂಪಡೆಯಲು ಜಿಲ್ಲೆಯ ಜನರ ಪರವಾಗಿ ಬೇಕಾದ ಕ್ರಮಬದ್ದವಾದ ಪ್ರಯತ್ನಗಳನ್ನು ನಡೆಸಬೇಕು ಎಂದು ನಿಯೋಗ ಒತ್ತಾಯಿಸಿದೆ.

ಹೆಜಮಾಡಿಯಲ್ಲಿ ಹೆಚ್ಚುವರಿ ಸುಂಕ ಸಂಗ್ರಹ ಆರಂಭಿಸಿದಲ್ಲಿ ಸುರತ್ಕಲ್ ಮಾದರಿಯಲ್ಲಿ ಹೋರಾಟ ನಡೆಸಲಾಗುವುದು. ಹೆಜಮಾಡಿ ಟೋಲ್ಗೇಟ್ ಮುಂಭಾಗ ಈಗಾಗಲೆ ಸಾಮೂಹಿಕ ಧರಣಿ ನಡೆಸಿ ಹೋರಾಟಕ್ಕೆ ಚಾಲನೆಯನ್ನು ನೀಡಲಾಗಿದೆ. ಈ ಆದೇಶ ಜಾರಿಯಾದಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆಯಲಿವೆ ಎಂದು ನಿಯೋಗ ಎಚ್ಚರಿಕೆ ನೀಡಿತು. ಮನವಿಯನ್ನು ಅಪರ ಜಿಲ್ಲಾಧಿಕಾರಿ ವೀಣಾ ಸ್ವೀಕರಿಸಿದರು.

ನಿಯೋಗದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಸಹ ಸಂಚಾಲಕ ಶೇಖರ ಹೆಜಮಾಡಿ, ಮಾಜಿ ಶಾಸಕ ಗೋಪಾಲ ಪೂಜಾರಿ, ಪ್ರಮುಖರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಕವಿರಾಜ್ ಎಸ್., ಪ್ರಶಾಂತ್ ಪೂಜಾರಿ, ಶರತ್ ಶೆಟ್ಟಿ, ಶ್ರೀನಿವಾಸ್ ಹೆಬ್ಬಾರ್, ಸಾಯಿರಾಜ್ ಕಿದಿಯೂರು, ಯತೀಶ್ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago