ಉಡುಪಿ : ದೈವಸ್ಥಾನದಲ್ಲಿ ಇರಬೇಕಾದ ಪವಿತ್ರ ಕಡ್ಸಲೆಯನ್ನು ತನ್ನ ಪಕ್ಷದ ನಾಯಕನ ಮನವೊಲಿಸಲು ಬಳಸಿರುವುದು ಅಕ್ಷಮ್ಯ ಅಪರಾಧ, ಹಿಂದೂ ಧರ್ಮ ಹಿಂದೂ ಸಂಸ್ಕೃತಿಗೆ ನಿರಂತರವಾಗಿ ಅಪಮಾನ ಮಾಡುವುದು ಕಾಂಗ್ರೆಸ್ಸಿನ ಚಾಳಿಯಾಗಿ ಬಿಟ್ಟಿದೆ. ಮಂಜುನಾಥ ಪೂಜಾರಿಯವರು ಈ ರೀತಿಯ ಮೂರ್ಖತನದ ವರ್ತನೆ ಪ್ರದರ್ಶಿಸುವುದು ಇದೇ ಮೊದಲಲ್ಲ, ಆದರೆ ಈ ಬಾರಿಯ ಅವರ ನಡೆ ಮೂರ್ಖತನದ ಪರಮಾವಧಿ. ಉಡುಗೊರೆ ನೀಡಲು ಬೇಕಾದಷ್ಟು ಆಯ್ಕೆಗಳಿದ್ದರೂ, ಕಡ್ಸಲೆಯನ್ನೆ ಆರಿಸಿ ಕೊಂಡು, ಉದ್ದೇಶ ಪೂರ್ವಕವಾಗಿ ತುಳುನಾಡ ಸಂಸ್ಕೃತಿಯನ್ನು ಅಪಮಾನಿಸಿದ್ದಾರೆಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ವಿಖ್ಯಾತ್ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಂಜುನಾಥ್ ಪೂಜಾರಿಯವರು ತುಳುನಾಡಿನವರಾಗಿದ್ದು, ಅವರಿಗೆ ಕಡ್ಸಲೆಯ ಮಹತ್ವ ತಿಳಿದಿಲ್ಲದಿರುವುದು ದುರಾದೃಷ್ಟ! ದೈವಾರಾಧನೆ ತುಳುನಾಡಿನ ಹೆಮ್ಮೆಯ ಸಂಸ್ಕೃತಿ, ತಮ್ಮ ಈ ನೀಚ ನಡೆ ಇಡೀ ತುಳುನಾಡಿನ ಜನರ ಧಾರ್ಮಿಕ ನಂಬಿಕೆಗೆ ಧಕ್ಕೆ ತಂದಿದೆ. ತಕ್ಷಣ ತಾವು ಬಹಿರಂಗವಾಗಿ ಕ್ಷಮೆಯಾಚಿಸಬೇಕು, ಇಲ್ಲವಾದಲ್ಲಿ ತಮ್ಮ ವಿರುದ್ಧ ತುಳುನಾಡಿನ ಜನತೆ ಸಿಡಿದೆಳಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿರುವ ವಿಖ್ಯಾತ ಶೆಟ್ಟಿಯವರು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿಯವರ ನಡೆಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…