ಉಡುಪಿ : ದೈವಸ್ಥಾನದಲ್ಲಿ ಇರಬೇಕಾದ ಪವಿತ್ರ ಕಡ್ಸಲೆಯನ್ನು ತನ್ನ ಪಕ್ಷದ ನಾಯಕನ ಮನವೊಲಿಸಲು ಬಳಸಿರುವುದು ಅಕ್ಷಮ್ಯ ಅಪರಾಧ, ಹಿಂದೂ ಧರ್ಮ ಹಿಂದೂ ಸಂಸ್ಕೃತಿಗೆ ನಿರಂತರವಾಗಿ ಅಪಮಾನ ಮಾಡುವುದು ಕಾಂಗ್ರೆಸ್ಸಿನ ಚಾಳಿಯಾಗಿ ಬಿಟ್ಟಿದೆ. ಮಂಜುನಾಥ ಪೂಜಾರಿಯವರು ಈ ರೀತಿಯ ಮೂರ್ಖತನದ ವರ್ತನೆ ಪ್ರದರ್ಶಿಸುವುದು ಇದೇ ಮೊದಲಲ್ಲ, ಆದರೆ ಈ ಬಾರಿಯ ಅವರ ನಡೆ ಮೂರ್ಖತನದ ಪರಮಾವಧಿ. ಉಡುಗೊರೆ ನೀಡಲು ಬೇಕಾದಷ್ಟು ಆಯ್ಕೆಗಳಿದ್ದರೂ, ಕಡ್ಸಲೆಯನ್ನೆ ಆರಿಸಿ ಕೊಂಡು, ಉದ್ದೇಶ ಪೂರ್ವಕವಾಗಿ ತುಳುನಾಡ ಸಂಸ್ಕೃತಿಯನ್ನು ಅಪಮಾನಿಸಿದ್ದಾರೆಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ವಿಖ್ಯಾತ್ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಂಜುನಾಥ್ ಪೂಜಾರಿಯವರು ತುಳುನಾಡಿನವರಾಗಿದ್ದು, ಅವರಿಗೆ ಕಡ್ಸಲೆಯ ಮಹತ್ವ ತಿಳಿದಿಲ್ಲದಿರುವುದು ದುರಾದೃಷ್ಟ! ದೈವಾರಾಧನೆ ತುಳುನಾಡಿನ ಹೆಮ್ಮೆಯ ಸಂಸ್ಕೃತಿ, ತಮ್ಮ ಈ ನೀಚ ನಡೆ ಇಡೀ ತುಳುನಾಡಿನ ಜನರ ಧಾರ್ಮಿಕ ನಂಬಿಕೆಗೆ ಧಕ್ಕೆ ತಂದಿದೆ. ತಕ್ಷಣ ತಾವು ಬಹಿರಂಗವಾಗಿ ಕ್ಷಮೆಯಾಚಿಸಬೇಕು, ಇಲ್ಲವಾದಲ್ಲಿ ತಮ್ಮ ವಿರುದ್ಧ ತುಳುನಾಡಿನ ಜನತೆ ಸಿಡಿದೆಳಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿರುವ ವಿಖ್ಯಾತ ಶೆಟ್ಟಿಯವರು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿಯವರ ನಡೆಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…