Featured

ಉಡುಪಿ : ಹೈಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು : ಜಿಲ್ಲಾಧಿಕಾರಿ – Vishwanews24

ಉಡುಪಿ : ಹೈಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು : ಜಿಲ್ಲಾಧಿಕಾರಿ – Vishwanews24

ಮಾ.21ರ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ಜಾರಿ..

ಉಡುಪಿ: ಹಿಜಾಬ್ ಪ್ರಕರಣದ ಕುರಿತು ಮಂಗಳವಾರ ಹೈಕೋರ್ಟ್ ತೀರ್ಪು ನೀಡಿದ್ದು, ಇಂದಿನಿಂದ ಎಂದಿನಂತೆ ಶಾಲಾ- ಕಾಲೇಜು ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಎಂ ಕೂರ್ಮಾ ರಾವ್ ಅವರು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ” ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಂಗಳವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇಂದು ಎಲ್ಲಾ ತರಗತಿಗಳು ಯಾವುದೇ ಗೊಂದಲಗಳಿಲ್ಲ ಎಂದಿನಂತೆ ಆರಂಭವಾಗಿದೆ. ಹೈಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕಾನೂನು ಕ್ರಮ ತೆಗೆದುಕೊಂಡಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಮತ್ತು ಜನರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ನಾವು ವಿನಂತಿಸುತ್ತೇವೆ.

“ಸದ್ಯ ಶೇಕಡಾವಾರು ಹಾಜರಾತಿ ಶೇ.91 ಇದ್ದು, ಪರೀಕ್ಷೆಗೆ ಗೈರು ಹಾಜರಾಗಿರುವ ವಿದ್ಯಾರ್ಥಿಗಳ ಬಗ್ಗೆ ಗಮನಹರಿಸುತ್ತೇವೆ” ಎಂದು ಹೇಳಿದ್ದಾರೆ.

ಇನ್ನು ಜಿಲ್ಲೆಯಲ್ಲಿ ಮಾ.21ರ ಸಂಜೆ 6 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ಅನ್ವಯ ನಿಷೇದಾಜ್ಞೆ ಜಾರಿಯಲ್ಲಿದೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

12 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

12 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

13 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

13 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago