Featured

ಉಡುಪಿ:  ಹೈಕೋರ್ಟ್ ನಲ್ಲಿ ವಿಧಿಸಿರುವ ತಡೆಯಾಜ್ಞೆ ಹಿಂಪಡೆದು ತನಿಖೆ ಎದುರಿಸಿ : ಯಶ್‌ಪಾಲ್ ಗೆ ರಘುಪತಿ ಭಟ್ ಸವಾಲು -vishwanews24

ಉಡುಪಿ:  ಹೈಕೋರ್ಟ್ ನಲ್ಲಿ ವಿಧಿಸಿರುವ ತಡೆಯಾಜ್ಞೆ ಹಿಂಪಡೆದು ತನಿಖೆ ಎದುರಿಸಿ : ಯಶ್‌ಪಾಲ್  ಗೆ ರಘುಪತಿ ಭಟ್ ಸವಾಲು

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಮಲ್ಪೆ ಶಾಖೆಯ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಸಾಲ ಪತ್ರದಲ್ಲಿರುವುದು ನಮ್ಮ ಸಹಿ ಎಲ್ಲ ಎಂಬುದಾಗಿ ಸಂತ್ರಸ್ತರು ದಾಖಲಿಸಿರುವ ಎಫ್‌ಐಆರ್‌ಗೆ ಮಹಾ ಲಕ್ಷ್ಮೀ ಬ್ಯಾಂಕ್ ಅಧ್ಯಕ್ಷರಾಗಿರುವ ಶಾಸಕ ಯಶ್‌ಪಾಲ್ ಸುವರ್ಣ ಹೈಕೋರ್ಟ್ ನಲ್ಲಿ ವಿಧಿಸಿರುವ ತಡೆಯಾಜ್ಞೆಯನ್ನು ಸ್ವಯಂ ಹಿಂಪಡೆದು ತನಿಖೆಯನ್ನು ಎದುರಿಸಲಿ ಎಂದು ಮಾಜಿ ಶಾಸಕ ಕೆ.ರಘುಪತಿ ಭಟ್ ಸವಾಲು ಹಾಕಿದ್ದಾರೆ.

ಈ ಕುರಿತು ರಘುಪತಿ ಭಟ್, ಬ್ಯಾಂಕ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಅವರಿಗೆ ಪತ್ರ ಬರೆದಿದ್ದು, ಯಶ್‌ಪಾಲ್ ಸುವರ್ಣ ಸಿ.ಬಿ.ಐ., ಇ.ಡಿ. ಇನ್ನಿತರ ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದೇವೆ ಎಂದು ಹೇಳಿರುವುದು ಪ್ರಶಂಸಾರ್ಹವಾಗಿದೆ. ಆದರೆ ಈ ತನಿಖೆಗಳನ್ನು ನಡೆಸುವ ಮುಂಚಿತವಾಗಿ ತಮ್ಮದೇ ವ್ಯಾಪ್ತಿಯಲ್ಲಿ ಉಡುಪಿ ಹಾಗೂ ಇನ್ನಿತರ ಪೊಲೀಸ್ ಠಾಣೆಗಳಲ್ಲಿ ಸಂತ್ರಸ್ತರು ಈಗಾಗಲೇ ನೀಡಿರುವ ದೂರಿಗೆ ಆಗಿರುವ ಎಫ್‌ಐಆರ್ ಮೇಲೆ ತಾವು ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದು, ಈ ತಡೆಯಾಜ್ಞೆಯನ್ನು ತೆರವುಗೊಳಿಸಿ, ತನಿಖೆಗೆ ಸ್ಪಂದಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಂತ್ರಸ್ತರ ಸಾಲದ ಅರ್ಜಿಗಳಲ್ಲಿ ಹಾಗೂ ಸಾಲದ ದಾಖಲಾತಿಗಳಲ್ಲಿ ಸಂತ್ರಸ್ತರು ತಮ್ಮ ಸಹಿ ಅಲ್ಲ ಎಂದು ಹೇಳುತ್ತಿರುವ ಕಾರಣ ಈ ಸಹಿಗಳ ಸತ್ಯಸತ್ಯಾತೆಯನ್ನು ತಿಳಿಯಲು ಪೊಲೀಸ್ ಇಲಾಖೆಯ ಮೂಲಕ ಎಫ್‌ಎಸ್‌ಎಲ್(ವಿಧಿ ವಿಜ್ಞಾನ ಪ್ರಯೋಗಾಲಯ) ಪರೀಕ್ಷೆಗೆ ಕಳುಹಿಸಲು ಅನುವು ಮಾಡಿಕೊಡಬೇಕು. ಆದುದರಿಂದ ಹೈಕೋರ್ಟ್‌ನಿಂದ ತಡೆಯಾಜ್ಞೆ ಯನ್ನು ಹಿಂಪಡೆದು ನ್ಯಾಯಯುತವಾದ ತನಿಖೆ ನಡೆದು ಸತ್ಯಸತ್ಯಾತೆಯು ಹೊರಬರಬೇಕು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ನನ್ನ ಈ ಹೋರಾಟ, ಅನ್ಯಾಯವಾಗಿದೆಯೆಂದು ತಮ್ಮ ಅಳಲು ತೋಡಿಕೊಂಡು ಸಹಾಯ ನಿರೀಕ್ಷಿಸಿದ ಸಂತ್ರಸ್ತರ ಹಿತ ಕಾಪಾಡುವುದೇ ಹೊರತು, ತಮ್ಮ ಅಥವಾ ಬ್ಯಾಂಕಿನ ವಿರುದ್ಧ ಆಗಿರುವುದಿಲ್ಲ. ಇದರಲ್ಲಿ ನನ್ನ ಯಾವುದೇ ವೈಯಕ್ತಿಕ ಹಿತಾಸಕ್ತಿಯಿರುವುದಿಲ್ಲ. ಅನ್ಯಾಯವಾಗಿದೆ ಎಂದು ನನ್ನ ಬಳಿ ಬಂದಿರುವ ಸಾಲಗಾರ ಸಂತ್ರಸ್ತರ ಪರ ಕಾನೂನು ಹೋರಾಟ ಮಾಡಲು ನಾನು ಇನ್ನು ಮುಂದೆಯೂ ಬದ್ಧನಾಗಿದ್ದೇನೆ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

2 seconds ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago