ಉಡುಪಿ : ರಾಜ್ಯದಲ್ಲಿ ಒಂದು ವರ್ಷಕ್ಕಿಂತ ಅಧಿಕ ದಿನಗಳಿಂದ ತೆರಿಗೆ ಪಾವತಿಸದೇ ಹೊರರಾಜ್ಯದ ವಾಹನಗಳು ಓಡಾಡುತ್ತಿರುವುದು ಕಂಡುಬ0ದಿದ್ದು, ಹೊರ ರಾಜ್ಯದ ಮೋಟಾರು ವಾಹನ ಮಾಲೀಕರು ಈ ಪ್ರಕಟಣೆಯ ಒಂದು ವಾರದ ಒಳಗೆ ತಮ್ಮ ವಾಹನಗಳಿಗೆ ರಾಜ್ಯದ ತೆರಿಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಪಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ಸೂಚನೆ ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಹೊರರಾಜ್ಯದ ವಾಹನಗಳು ತೆರಿಗೆ ಪಾವತಿಸದೇ ಜಿಲ್ಲೆಯಲ್ಲಿ ಸಂಚರಿಸುತ್ತಿರುವುದು ಕಂಡುಬ0ದಲ್ಲಿ ತಪಾಸಣೆ ವೇಳೆ ವಾಹನವನ್ನು ಮುಟ್ಟುಗೋಲು ಹಾಕಲಾಗುವುದು. ಹೊರರಾಜ್ಯದ ವಾಹನಗಳಿಗೆ ಬಿ.ಹೆಚ್ ಸೀರಿಸ್ ಸಂಖ್ಯೆಯನ್ನು ಪಡೆಯಲು ಇಚ್ಛಿಸುವ ಕೇಂದ್ರ ಸರ್ಕಾರಿ ನೌಕರರು, ತಮ್ಮ ಹೊಸ ವಾಹನದ ನೋಂದಣಿಯ ಸಮಯದಲ್ಲಿ ವಿಳಾಸ ಪುರಾವೆ, ತತ್ಸಂಬ0ಧ ಉದ್ಯೋಗ ಖಾತರಿ ಪತ್ರದ ಪ್ರತಿ, ಸಂಬ0ಧಪಟ್ಟ ಇಲಾಖೆಯ ಸೇವಾ ಗುರುತಿನ ಚೀಟಿ, ಮೇಲಾಧಿಕಾರಿಗಳ ಪ್ರಮಾಣ ಪತ್ರ ಹಾಗೂ ರಹವಾಸಿ ಪ್ರಮಾಣ ಪತ್ರ ಹಾಜರುಪಡಿಸಿ, ಏಕರೂಪದ ತೆರಿಗೆಯನ್ನು ಪಾವತಿಸಲು
ಅವಕಾಶವಿರುತ್ತದೆ.
ಹೊರರಾಜ್ಯದ ವಾಹನಗಳು ರಾಜ್ಯಕ್ಕೆ ವಲಸೆ ಬಂದಾಗ ಇನ್ವಾಯ್ಸ್ ಅಥವಾ ವಾಹನ ಖರೀದಿ ಪುರಾವೆ, ನಮೂನೆ 27-2 ಅರ್ಜಿ, ಆಕ್ಷೇಪಣಾ ರಹಿತ ಪತ್ರ, ಸ್ಮಾರ್ಟ್ ಕಾರ್ಡ್ ಅಥವಾ ನೋಂದಣಿ ಪತ್ರ, ವಿಮಾ ಪತ್ರ, ವಾಯುಮಾಲಿನ್ಯ ತಪಾಸಣಾ ಪತ್ರ, ಆಧಾರ/ ವಿಳಾಸ ಪುರಾವೆ ಹಾಗೂ ಭಾವಚಿತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.
ಹೊರರಾಜ್ಯದ ವಾಹನ ಮಾಲೀಕರು ರಾಜ್ಯಕ್ಕೆ ವಲಸೆ ಬಂದಲ್ಲಿ ಕೂಡಲೇ ರಾಜ್ಯದ ತೆರಿಗೆಯನ್ನು ಪಾವತಿಸಬೇಕು. ಇಲ್ಲವಾದಲ್ಲಿ ವಾಹನ ಮುಟ್ಟುಗೋಲು ಹಾಕಿ ತೆರಿಗೆ ಹಾಗೂ ದಂಡ ವಿಧಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…