Featured

ಉಡುಪಿ :ಹೊಳಪು ಕ್ರೀಡೋತ್ಸವ -ಸಾಂಸ್ಕೃತಿಕ ಸ್ಪರ್ದೆಗಳಿಗೆ ಚಾಲನೆ -Vishwanews24

ಉಡುಪಿ :ಹೊಳಪು ಕ್ರೀಡೋತ್ಸವ -ಸಾಂಸ್ಕೃತಿಕ ಸ್ಪರ್ದೆಗಳಿಗೆ ಚಾಲನೆ -Vishwanews24

ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತ್,ಡಾ.ಶಿವರಾಮ ಕಾರಂತ ಪ್ರತಿಷ್ಠಾನ (ರಿ.)ಕೋಟ, ಡಾ.ಶಿವರಾಮ ಕಾರಂತ ಜನ್ಮದಿನೋತ್ಸವ ಅಂಗವಾಗಿ, ಕೋಟ ವಿವೇಕ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ, ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್‌ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ , ಹೊಳಪು ೨೦೨೧ – ಕ್ರೀಡೋತ್ಸವ -ಸಾಂಸ್ಕೃತಿಕ ಸ್ಪರ್ದೆಗಳಿಗೆ ಶನಿವಾರ ಚಾಲನೆ ನೀಡಲಾಯಿತು.

ದ.ಕನ್ನಡ ಜಿಲ್ಲೆ ಸಂಸದ ನಳಿನ್ ಕುಮಾರ್ ಕಟೀಲು ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್‌ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಪಥ ಸಂಚಲನದ ಗೌರವ ರಕ್ಷೆ ಸ್ವೀಕರಿಸಿದರು. ಉಡುಪಿ ಶಾಸಕ ರಘುಪತಿ ಭಟ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು. ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ಪ್ರತಿಜ್ಞಾವಿಧಿ ಭೋದಿಸಿದರು. ಶಾಸಕ ಯು.ಟಿ ಖಾದರ್ ಕ್ರೀಡಾಜ್ಯೋತಿ ಸ್ವೀಕರಿಸಿದರು. ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ಗೌಡ ಬಲೂನು ಹಾರಿ ಬಿಡುವುದರ ಮೂಲಕ ಕ್ರೀಡೆಗಳಿಗೆ ಚಾಲನೆ ನೀಡಿದರು. ಕನಾÀðಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತದ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಪಥ ಸಂಚಲನಕ್ಕೆ ಚಾಲನೆ ನೀಡಿದರು. ವಿನಯ್ ಗುರೂಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಿನೇಶ್ ಕುಂದರ್ ಸ್ವಾಗತಿಸಿದರು. ನರೇಂದ್ರ ಕುಮಾರ್ ಕೋಟ ನಿರೂಪಿಸಿದರು.

ನಾವೇನೂ ಶ್ರೀರಾಮನ ಭಕ್ತರಲ್ಲವೇ ? ನನ್ನ ಹೆಸರಲ್ಲಿ ಶಿವ.. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇಲ್ವಾ ? : ಡಿಕೆಶಿ -Vishwanews24

ಕಾರ್ಯಕ್ರಮದಲ್ಲಿ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅದ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ರಾಷ್ಟಿçÃಯ ಮಹಿಳಾ ಅಯೋಗದ ಸದಸ್ಯೆ ಶ್ಯಾಮಲ ಎಸ್ ಕುಂದರ್, ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅತೀಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಮತ್ತಿತರರು ಉಪಸ್ಥಿತರಿದ್ದರು.

ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮಾಜಿ ಸಚಿವ ಯಶವಂತ್ ಸಿನ್ಹ -Vishwanews24

ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್‌ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು, ಪಥ ಸಂಚಲನದಲ್ಲಿ ವಿವಿಧ ಸ್ಥಬ್ದಚಿತ್ರಗಳ ಪ್ರದರ್ಶನ, ಯಕ್ಷಗಾನದ ವೇಷಗಳು, ತಟ್ಟೆರಾಯ ವೇಷಗಳು, ಕೊರಗರ ಡೋಲು ವಾದನ, ಕಂಬಳ ಕೋಣಗಳು, ಕಹಳೆ ವಾದನ, ಕೋವಿಡ್ ಕುರಿತು ಜಾಗೃತಿ ಮೂಡಿಸುವ ಸ್ಥಬ್ದಚಿತ್ರ, ಕೋವಿಡ್ ಲಸಿಕೆ ಕುರಿತ ಸ್ಥಬ್ದಚಿತ್ರಗಳು, ಸಾಂಪ್ರದಾಯಿಕ ಧರಿಸು ತೊಟ್ಟ ಜನಪ್ರತಿನಿಧಿಗಳ ತಂಡಗಳು ಪಥ ಸಂಚಲನದ ಮೆರುಗನ್ನು ಹೆಚ್ಚಿಸಿದ್ದವು.

ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಕ್ಷೇತ್ರದಲ್ಲಿ ಗಣನೀಯ ಸಾಧನೆ ತೋರಿದ ಪಂಚಾಯತ್ ಗಳಿಗೆ ಬಹುಮಾನ ವಿತರಿಸಲಾಯಿತು. ಪಥ ಸಂಚಲನದಲ್ಲಿ ವಿಜೇತ ತಂಡಕ್ಕೆ ಬಹುಮಾನ ನೀಡಲಾಯಿತು.

ಕಾರ್ಕಳ : ಅವಧಿ ಮೀರಿದ ಆಹಾರ ತಿಂದು 5 ಹಸುಗಳು ಸಾವು, ಹಲವು ಅಸ್ವಸ್ಥ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

14 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

14 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

14 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

15 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

15 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

17 hours ago