ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತ್,ಡಾ.ಶಿವರಾಮ ಕಾರಂತ ಪ್ರತಿಷ್ಠಾನ (ರಿ.)ಕೋಟ, ಡಾ.ಶಿವರಾಮ ಕಾರಂತ ಜನ್ಮದಿನೋತ್ಸವ ಅಂಗವಾಗಿ, ಕೋಟ ವಿವೇಕ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ, ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ , ಹೊಳಪು ೨೦೨೧ – ಕ್ರೀಡೋತ್ಸವ -ಸಾಂಸ್ಕೃತಿಕ ಸ್ಪರ್ದೆಗಳಿಗೆ ಶನಿವಾರ ಚಾಲನೆ ನೀಡಲಾಯಿತು.
ದ.ಕನ್ನಡ ಜಿಲ್ಲೆ ಸಂಸದ ನಳಿನ್ ಕುಮಾರ್ ಕಟೀಲು ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಪಥ ಸಂಚಲನದ ಗೌರವ ರಕ್ಷೆ ಸ್ವೀಕರಿಸಿದರು. ಉಡುಪಿ ಶಾಸಕ ರಘುಪತಿ ಭಟ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು. ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ಪ್ರತಿಜ್ಞಾವಿಧಿ ಭೋದಿಸಿದರು. ಶಾಸಕ ಯು.ಟಿ ಖಾದರ್ ಕ್ರೀಡಾಜ್ಯೋತಿ ಸ್ವೀಕರಿಸಿದರು. ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ಗೌಡ ಬಲೂನು ಹಾರಿ ಬಿಡುವುದರ ಮೂಲಕ ಕ್ರೀಡೆಗಳಿಗೆ ಚಾಲನೆ ನೀಡಿದರು. ಕನಾÀðಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತದ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಪಥ ಸಂಚಲನಕ್ಕೆ ಚಾಲನೆ ನೀಡಿದರು. ವಿನಯ್ ಗುರೂಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಿನೇಶ್ ಕುಂದರ್ ಸ್ವಾಗತಿಸಿದರು. ನರೇಂದ್ರ ಕುಮಾರ್ ಕೋಟ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅದ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ರಾಷ್ಟಿçÃಯ ಮಹಿಳಾ ಅಯೋಗದ ಸದಸ್ಯೆ ಶ್ಯಾಮಲ ಎಸ್ ಕುಂದರ್, ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅತೀಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಮತ್ತಿತರರು ಉಪಸ್ಥಿತರಿದ್ದರು.
ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮಾಜಿ ಸಚಿವ ಯಶವಂತ್ ಸಿನ್ಹ -Vishwanews24
ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು, ಪಥ ಸಂಚಲನದಲ್ಲಿ ವಿವಿಧ ಸ್ಥಬ್ದಚಿತ್ರಗಳ ಪ್ರದರ್ಶನ, ಯಕ್ಷಗಾನದ ವೇಷಗಳು, ತಟ್ಟೆರಾಯ ವೇಷಗಳು, ಕೊರಗರ ಡೋಲು ವಾದನ, ಕಂಬಳ ಕೋಣಗಳು, ಕಹಳೆ ವಾದನ, ಕೋವಿಡ್ ಕುರಿತು ಜಾಗೃತಿ ಮೂಡಿಸುವ ಸ್ಥಬ್ದಚಿತ್ರ, ಕೋವಿಡ್ ಲಸಿಕೆ ಕುರಿತ ಸ್ಥಬ್ದಚಿತ್ರಗಳು, ಸಾಂಪ್ರದಾಯಿಕ ಧರಿಸು ತೊಟ್ಟ ಜನಪ್ರತಿನಿಧಿಗಳ ತಂಡಗಳು ಪಥ ಸಂಚಲನದ ಮೆರುಗನ್ನು ಹೆಚ್ಚಿಸಿದ್ದವು.
ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಕ್ಷೇತ್ರದಲ್ಲಿ ಗಣನೀಯ ಸಾಧನೆ ತೋರಿದ ಪಂಚಾಯತ್ ಗಳಿಗೆ ಬಹುಮಾನ ವಿತರಿಸಲಾಯಿತು. ಪಥ ಸಂಚಲನದಲ್ಲಿ ವಿಜೇತ ತಂಡಕ್ಕೆ ಬಹುಮಾನ ನೀಡಲಾಯಿತು.
ಕಾರ್ಕಳ : ಅವಧಿ ಮೀರಿದ ಆಹಾರ ತಿಂದು 5 ಹಸುಗಳು ಸಾವು, ಹಲವು ಅಸ್ವಸ್ಥ -Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…