Featured

ಉಡುಪಿ: ಹೊಸ ವರ್ಷಾಚರಣೆ – ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ – Vishwanews24

ಉಡುಪಿ: ಹೊಸ ವರ್ಷಾಚರಣೆ – ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ

ಉಡುಪಿ: ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ 31-12-2022 – 1-1-2023 ರ 1 ಗಂಟೆಯ ವರೆಗೆ ಉಡುಪಿ ಜಿಲ್ಲೆಯಾದ್ಯಂತ ಹೊಸ ವರ್ಷದ ಆಚರಣೆ ನಡೆಸುವ ಸಮಯ, ಕಾರ್ಯಕ್ರಮಮಗಳ ಸಂಘಟಕರು ಮತ್ತು ಸಾರ್ವಜನಿಕರು ಈ ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಕೋವಿಡ್ 19ಗೆ ಸಂಬಂಧಪಟ್ಟಂತೆ ನೀಡಲಾದ ಸೂಚನೆಗಳನ್ನು ಹೊಸ ವರ್ಷಾಚರಣೆ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು

ಎಲ್ಲಾ ರೀತಿಯ ಆಚರಣೆಗಳು ದಿನಾಂಕ: 01-01-2023 ರ 1 ಗಂಟೆಯ ಒಳಗಾಗಿ ಮುಕ್ತಾಯಗೊಳ್ಳತಕ್ಕದ್ದು,

Indoor functions, Pubs/Restaurants/Clubs/Resorts ಮುಂದಾತದ ಕಡೆಗಳಲ್ಲಿ ಅದರ Capacity ಮೀರದಂತೆ ಜನರು ಇರುವಂತೆ ನೋಡಿಕೊಳ್ಳಬೇಕು ಹಾಗೂ ಅಲ್ಲಿ ವಿದ್ಯುತ್ ಅಥವಾ ಅಗ್ನಿ ಅವಘಡಗಳು ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

ಹೋಟೆಲ್ ಪಬ್ ರೆಸ್ಟಾರೆಂಟ್ ಹೋಮ್ ಸ್ಟೇ ಪಿಜಿಗಳಲ್ಲಿ ಸಾರ್ವಜರಿಗೆ ಈವೆಂಟ್‌ಗಳನ್ನು ಆಯೋಜಿಸುವಾಗ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಕಡ್ಡಾಯವಾಗಿ ಮಾಹಿತಿ ನೀಡತಕ್ಕದ್ದು, ಕಾರ್ಯಕ್ರಮಗಳ ಆಯೋಜಕರು ಭದ್ರ ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಸ್ವಯಂಸೇವಕರು, ಪುರುಷ ಮತ್ತು ಮಹಿಳಾ ಭದ್ರತಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು.

ವಾಹನ ಪಾರ್ಕಿ೦ಗ್‌ಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳುವುದು, ಇತರೇ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಅಡತಡೆಯಾಗದೇ ಸುಗಮ ಸಂಚಾರಕ್ಕೆ ಮುಂಗಡವಾಗಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವುದು. ಯಾವುದೇ ರೀತಿಯ ವಾಹನ ಅಪಘಾತಗಳಗದಂತೆ ಮುಂಜಾಗ್ರತ ಕ್ರಮ ವಹಿಸುವುದು,

ಬಸ್ ಸ್ಟ್ಯಾಂಡ್ ಬೀಚ್, ರಸ್ತೆ, ಫುಟ್ ಪಾತ್, ಉದ್ಯಾನವನದಲ್ಲಿ ಮತ್ತು ಇತರೇ ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷಾಚರಣೆಯ ಯಾವುದೇ ಕಾರ್ಯಕ್ರಮಗಳನ್ನು ನಡೆಸಬಾರದು.

ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಮಲು ಅಥವಾ ಮದ್ಯದ ನಷೆಯಲ್ಲಿ ಆಚರಣೆ ಮಾಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು.

ಹೊಸ ವರ್ಷಾಚರಣೆಯ ನೆಪದಲ್ಲಿ ಜನರೊಂದಿಗೆ ಮಹಿಳೆಯರೊಂದಿಗೆ ಅನುಚಿತ ವರ್ತನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರಗಿಸಲಾಗುವುದು,

ಲೌಡ್ ಸ್ಪೀಕರ್ ಗಳನ್ನು ಸರ್ವೋಚ್ಚ ನ್ಯಾಯಾಲಯ ಮತ್ತು ಸರ್ಕಾರದ ಆದೇಶಗಳನ್ನು ಉಲ್ಲಂಘನೆಯಾಗದಂತೆ ಮತ್ತು ಶಬ್ದ ಮಾಲಿನ್ಯ ಆಗದಂತ ಧ್ವನಿವರ್ಧಕದ ಡೆಸಿಬಲ್‌ ಮಿತಿಯಲ್ಲಿ ಇಟ್ಟು ಆಚರಣೆ ನಡೆಸಬೇಕು.

ಹೊಸ ವರ್ಷಾಚರಣೆ ಸಮಯ ಅಕ್ಕಪಕ್ಕದ ಜನರಿಗೆ ತೊಂದರೆಯಾಗದಂತೆ ವಿಶೇಷವಾಗಿ ಆಸ್ಪತ್ರೆ ಅಪಾರ್ಟ್ ಮೆಂಟ್‌ಗಳಲ್ಲಿ ವಾಸಿಸುವ ಹಿರಿಯ ಜನರಿಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

ರಾತ್ರಿ ಹೊತ್ತು ಕುಡಿದು ವಾಹನ ಚಾಲನೆ ಅತೀ ವೇಗ/ ನಿರ್ಲಕ್ಷ್ಯತನದ ವಾಹನ ಚಾಲನೆ ನಡೆಸುವವರ ವಿರುದ್ದ ಪ್ರಕರಣ ದಾಖಲಿಸಲಾಗುವುದು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago