Featured

ಉಡುಪಿ: ಹೊಸ ವರ್ಷಾಚರಣೆ – ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ – Vishwanews24

ಉಡುಪಿ: ಹೊಸ ವರ್ಷಾಚರಣೆ – ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ

ಉಡುಪಿ: ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ 31-12-2022 – 1-1-2023 ರ 1 ಗಂಟೆಯ ವರೆಗೆ ಉಡುಪಿ ಜಿಲ್ಲೆಯಾದ್ಯಂತ ಹೊಸ ವರ್ಷದ ಆಚರಣೆ ನಡೆಸುವ ಸಮಯ, ಕಾರ್ಯಕ್ರಮಮಗಳ ಸಂಘಟಕರು ಮತ್ತು ಸಾರ್ವಜನಿಕರು ಈ ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಕೋವಿಡ್ 19ಗೆ ಸಂಬಂಧಪಟ್ಟಂತೆ ನೀಡಲಾದ ಸೂಚನೆಗಳನ್ನು ಹೊಸ ವರ್ಷಾಚರಣೆ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು

ಎಲ್ಲಾ ರೀತಿಯ ಆಚರಣೆಗಳು ದಿನಾಂಕ: 01-01-2023 ರ 1 ಗಂಟೆಯ ಒಳಗಾಗಿ ಮುಕ್ತಾಯಗೊಳ್ಳತಕ್ಕದ್ದು,

Indoor functions, Pubs/Restaurants/Clubs/Resorts ಮುಂದಾತದ ಕಡೆಗಳಲ್ಲಿ ಅದರ Capacity ಮೀರದಂತೆ ಜನರು ಇರುವಂತೆ ನೋಡಿಕೊಳ್ಳಬೇಕು ಹಾಗೂ ಅಲ್ಲಿ ವಿದ್ಯುತ್ ಅಥವಾ ಅಗ್ನಿ ಅವಘಡಗಳು ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

ಹೋಟೆಲ್ ಪಬ್ ರೆಸ್ಟಾರೆಂಟ್ ಹೋಮ್ ಸ್ಟೇ ಪಿಜಿಗಳಲ್ಲಿ ಸಾರ್ವಜರಿಗೆ ಈವೆಂಟ್‌ಗಳನ್ನು ಆಯೋಜಿಸುವಾಗ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಕಡ್ಡಾಯವಾಗಿ ಮಾಹಿತಿ ನೀಡತಕ್ಕದ್ದು, ಕಾರ್ಯಕ್ರಮಗಳ ಆಯೋಜಕರು ಭದ್ರ ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಸ್ವಯಂಸೇವಕರು, ಪುರುಷ ಮತ್ತು ಮಹಿಳಾ ಭದ್ರತಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು.

ವಾಹನ ಪಾರ್ಕಿ೦ಗ್‌ಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳುವುದು, ಇತರೇ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಅಡತಡೆಯಾಗದೇ ಸುಗಮ ಸಂಚಾರಕ್ಕೆ ಮುಂಗಡವಾಗಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವುದು. ಯಾವುದೇ ರೀತಿಯ ವಾಹನ ಅಪಘಾತಗಳಗದಂತೆ ಮುಂಜಾಗ್ರತ ಕ್ರಮ ವಹಿಸುವುದು,

ಬಸ್ ಸ್ಟ್ಯಾಂಡ್ ಬೀಚ್, ರಸ್ತೆ, ಫುಟ್ ಪಾತ್, ಉದ್ಯಾನವನದಲ್ಲಿ ಮತ್ತು ಇತರೇ ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷಾಚರಣೆಯ ಯಾವುದೇ ಕಾರ್ಯಕ್ರಮಗಳನ್ನು ನಡೆಸಬಾರದು.

ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಮಲು ಅಥವಾ ಮದ್ಯದ ನಷೆಯಲ್ಲಿ ಆಚರಣೆ ಮಾಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು.

ಹೊಸ ವರ್ಷಾಚರಣೆಯ ನೆಪದಲ್ಲಿ ಜನರೊಂದಿಗೆ ಮಹಿಳೆಯರೊಂದಿಗೆ ಅನುಚಿತ ವರ್ತನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರಗಿಸಲಾಗುವುದು,

ಲೌಡ್ ಸ್ಪೀಕರ್ ಗಳನ್ನು ಸರ್ವೋಚ್ಚ ನ್ಯಾಯಾಲಯ ಮತ್ತು ಸರ್ಕಾರದ ಆದೇಶಗಳನ್ನು ಉಲ್ಲಂಘನೆಯಾಗದಂತೆ ಮತ್ತು ಶಬ್ದ ಮಾಲಿನ್ಯ ಆಗದಂತ ಧ್ವನಿವರ್ಧಕದ ಡೆಸಿಬಲ್‌ ಮಿತಿಯಲ್ಲಿ ಇಟ್ಟು ಆಚರಣೆ ನಡೆಸಬೇಕು.

ಹೊಸ ವರ್ಷಾಚರಣೆ ಸಮಯ ಅಕ್ಕಪಕ್ಕದ ಜನರಿಗೆ ತೊಂದರೆಯಾಗದಂತೆ ವಿಶೇಷವಾಗಿ ಆಸ್ಪತ್ರೆ ಅಪಾರ್ಟ್ ಮೆಂಟ್‌ಗಳಲ್ಲಿ ವಾಸಿಸುವ ಹಿರಿಯ ಜನರಿಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

ರಾತ್ರಿ ಹೊತ್ತು ಕುಡಿದು ವಾಹನ ಚಾಲನೆ ಅತೀ ವೇಗ/ ನಿರ್ಲಕ್ಷ್ಯತನದ ವಾಹನ ಚಾಲನೆ ನಡೆಸುವವರ ವಿರುದ್ದ ಪ್ರಕರಣ ದಾಖಲಿಸಲಾಗುವುದು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

11 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

13 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

13 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

13 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

13 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago