ಉಡುಪಿ: ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿದೆ.
ಮಣಿಪಾಲ ಕಡೆಯಿಂದ ಬರುವ ಸರಕು ಲಘು ವಾಹನ, ಮಂಗಳೂರು, ಕಾಪು ಕಡೆ ಹೋಗುವವರು ಶಾರದಾ ಕಲ್ಯಾಣ ಮಂಟಪದ ಕಡೆಯಿಂದ ಚಲಿಸುವುದು.
ಕಲ್ಸಂಕ ವೃತ್ತ:
1).ಗುಂಡಿಬೈಲ ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಎದುರು ತಿರುಗಿಸಿಕೊಂಡು ಕೃಷ್ಣಮಠ ಮತ್ತು ಉಡುಪಿ ಕಡೆ ಬರುವುದು.
2).ಮಣಿಪಾಲ ಕಡೆಯಿಂದ ಬಂದು ಗುಂಡಿಬೈಲ ಕಡೆ ಹೋಗುವವರು ಸಿಟಿ ಬಸ್ಸ ನಿಲ್ದಾಣದ ಹತ್ತಿರ ತಿರುಗಿಸಿಕೊಂಡು ಬರುವುದು.
ಕರಾವಳಿ ಜಂಕ್ಷನ್ :
1) ಮಲ್ಪೆಯಿಂದ ಬರುವವರು ಕರಾವಳಿಗೆ ಬಂದು ಎಡಕ್ಕೆ ತಿರುಗಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ನಿಟ್ಟೂರ(ಆಭರಣ ಮೋಟರ್ಸ ಎದುರಿಗೆ U Turn ಮಾಡಿಕೊಂಡು ನಗರದ ಕಡೆ ಬರುವುದು.
2). ಮಂಗಳೂರು ಕಡೆಯಿಂದ ಬರುವವರು ಮಲ್ಪೆ ಹೋಗುವವರನ್ನು ಹೊರತುಪಡಿಸಿ ಉಳಿದವರೆಲ್ಲರೂ ನಿಟ್ಟೂರ (ಆಭರಣ ಮೋಟರ್ಸ) ಎದುರು ತಿರುಗಿಸಿ ಉಡುಪಿಗೆ ಬರುವುದು.
ಮಲ್ಪೆ :
ಮಲ್ಪೆ ಬೀಚ ಕಡೆಯಿಂದ ಬರುವವರು ಬಲರಾಮ ಸರ್ಕಲನಿಂದ ಹೊರಟು ಹೂಡೆ, ನೇಜಾರು ಮಾರ್ಗ ಬಳಸಿ ಸಂತೆಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ ಸೇರುವುದು.
ಸಾರ್ವಜನಿಕರು ನಾಳೆ ಇಂದಿನಿಂದ (28.12.2024 ) ದಿನಾಂಕ 01.01.2025 ರ ಸಂಜೆ 4.00 ಗಂಟೆಯಿಂದ ರಾತ್ರಿ 9.00 ಗಂಟೆಯ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಸೂಚಿಸಿದ ಮಾರ್ಗಗಳಲ್ಲಿ ಚಲಿಸಿ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…