ಉಡುಪಿ: ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿದೆ.
ಮಣಿಪಾಲ ಕಡೆಯಿಂದ ಬರುವ ಸರಕು ಲಘು ವಾಹನ, ಮಂಗಳೂರು, ಕಾಪು ಕಡೆ ಹೋಗುವವರು ಶಾರದಾ ಕಲ್ಯಾಣ ಮಂಟಪದ ಕಡೆಯಿಂದ ಚಲಿಸುವುದು.
ಕಲ್ಸಂಕ ವೃತ್ತ:
1).ಗುಂಡಿಬೈಲ ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಎದುರು ತಿರುಗಿಸಿಕೊಂಡು ಕೃಷ್ಣಮಠ ಮತ್ತು ಉಡುಪಿ ಕಡೆ ಬರುವುದು.
2).ಮಣಿಪಾಲ ಕಡೆಯಿಂದ ಬಂದು ಗುಂಡಿಬೈಲ ಕಡೆ ಹೋಗುವವರು ಸಿಟಿ ಬಸ್ಸ ನಿಲ್ದಾಣದ ಹತ್ತಿರ ತಿರುಗಿಸಿಕೊಂಡು ಬರುವುದು.
ಕರಾವಳಿ ಜಂಕ್ಷನ್ :
1) ಮಲ್ಪೆಯಿಂದ ಬರುವವರು ಕರಾವಳಿಗೆ ಬಂದು ಎಡಕ್ಕೆ ತಿರುಗಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ನಿಟ್ಟೂರ(ಆಭರಣ ಮೋಟರ್ಸ ಎದುರಿಗೆ U Turn ಮಾಡಿಕೊಂಡು ನಗರದ ಕಡೆ ಬರುವುದು.
2). ಮಂಗಳೂರು ಕಡೆಯಿಂದ ಬರುವವರು ಮಲ್ಪೆ ಹೋಗುವವರನ್ನು ಹೊರತುಪಡಿಸಿ ಉಳಿದವರೆಲ್ಲರೂ ನಿಟ್ಟೂರ (ಆಭರಣ ಮೋಟರ್ಸ) ಎದುರು ತಿರುಗಿಸಿ ಉಡುಪಿಗೆ ಬರುವುದು.
ಮಲ್ಪೆ :
ಮಲ್ಪೆ ಬೀಚ ಕಡೆಯಿಂದ ಬರುವವರು ಬಲರಾಮ ಸರ್ಕಲನಿಂದ ಹೊರಟು ಹೂಡೆ, ನೇಜಾರು ಮಾರ್ಗ ಬಳಸಿ ಸಂತೆಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ ಸೇರುವುದು.
ಸಾರ್ವಜನಿಕರು ನಾಳೆ ಇಂದಿನಿಂದ (28.12.2024 ) ದಿನಾಂಕ 01.01.2025 ರ ಸಂಜೆ 4.00 ಗಂಟೆಯಿಂದ ರಾತ್ರಿ 9.00 ಗಂಟೆಯ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಸೂಚಿಸಿದ ಮಾರ್ಗಗಳಲ್ಲಿ ಚಲಿಸಿ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…