ಉಡುಪಿ: ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭ ಅಹಿತಕರ ಘಟನೆ ತಡೆಯುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ. ಅವರು ಸಾರ್ವಜನಿಕರಿಗೆ ವಿಶೇಷ ಸೂಚನೆ ನೀಡಿದ್ದಾರೆ.
ಹೊಸ ವರ್ಷಾಚರಣೆಗೆ ಡಿ.31ರ ರಾತ್ರಿ 12.30ರ ವರೆಗೆ ಸಮಯ ನಿಗದಿ ಮಾಡಲಾಗಿದೆ. ಶಬ್ದ ಮಾಲಿನ್ಯವಾಗದಂತೆ ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆ ವರೆಗೆ ಮಾತ್ರ ಬಳಸಬಹುದು. ನೈತಿಕ ಪೊಲೀಸ್ಗಿರಿ, ಅನುಚಿತ ವರ್ತನೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು. ನೈತಿಕ ಪೊಲೀಸ್ಗಿರಿ ತಡೆಯಲು ಪೊಲೀಸರ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದಿದ್ದಾರೆ.
ಹೊಸ ವರ್ಷಾಚರಣೆ ಸಂದರ್ಭ ಸಾರ್ವಜನಿಕರಿಗೆ ತೊಂದರೆ ಆಗದಂತೆ ವಾಹನ ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕಿದೆ. ಹೊಸ ವರ್ಷಾಚರಣೆ ಸಮಯ ಅಕ್ಕಪಕ್ಕದ ಜನರಿಗೆ ತೊಂದರೆಯಾಗಬಾರದು. ವಿಶೇಷವಾಗಿ ಆಸ್ಪತ್ರೆ, ಅಪಾರ್ಟ್ಮೆಂಟ್ಗಳಲ್ಲಿ ವಾಸವಾಗಿರುವ ಹಿರಿಯರಿಗೆ, ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು. ಅಹಿತಕರ ಘಟನೆಗಳು ನಡೆ ದರೆ ಸಾರ್ವಜನಿಕರು 112ಕ್ಕೆ ಕರೆ ಮಾಡಿ ಪೊಲೀಸರ ಗಮನಕ್ಕೆ ತರಬಹುದು. ಕಾನೂನು ಕೈಗೆತ್ತಿಕೊಳ್ಳದೆ ಪೊಲೀಸರಿಗೆ ಮಾಹಿತಿ ನೀಡಬೇಕು. ಡ್ರಗ್ಸ್, ರೇವ್ಪಾರ್ಟಿ, ಅಪಾರ್ಟ್ಮೆಂಟ್, ಹೋಂಸ್ಟೇಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆ ಯದಂತೆ ವಿಶೇಷ ತಂಡ ಕಾರ್ಯನಿರ್ವಹಿಸಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…