Featured

ಉಡುಪಿ: ಹೊಸ ವರ್ಷ ಸಂಭ್ರಮಾಚರಣೆ ; ಅಹಿತಕರ ಘಟನೆ ತಡೆಗೆ ಸಾರ್ವಜನಿಕರಿಗೆ ಉಡುಪಿ ಎಸ್‌ಪಿ ವಿಶೇಷ ಸೂಚನೆ – vishwanews24

ಉಡುಪಿ: ಹೊಸ ವರ್ಷ ಸಂಭ್ರಮಾಚರಣೆ ; ಅಹಿತಕರ ಘಟನೆ ತಡೆಗೆ ಸಾರ್ವಜನಿಕರಿಗೆ ಉಡುಪಿ ಎಸ್‌ಪಿ ವಿಶೇಷ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭ ಅಹಿತಕರ ಘಟನೆ ತಡೆಯುವ ಉದ್ದೇಶದಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ. ಅವರು ಸಾರ್ವಜನಿಕರಿಗೆ ವಿಶೇಷ ಸೂಚನೆ ನೀಡಿದ್ದಾರೆ.

ಹೊಸ ವರ್ಷಾಚರಣೆಗೆ ಡಿ.31ರ ರಾತ್ರಿ 12.30ರ ವರೆಗೆ ಸಮಯ ನಿಗದಿ ಮಾಡಲಾಗಿದೆ. ಶಬ್ದ ಮಾಲಿನ್ಯವಾಗದಂತೆ ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆ ವರೆಗೆ ಮಾತ್ರ ಬಳಸಬಹುದು. ನೈತಿಕ ಪೊಲೀಸ್‌ಗಿರಿ, ಅನುಚಿತ ವರ್ತನೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು. ನೈತಿಕ ಪೊಲೀಸ್‌ಗಿರಿ ತಡೆಯಲು ಪೊಲೀಸರ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದಿದ್ದಾರೆ.

ಹೊಸ ವರ್ಷಾಚರಣೆ ಸಂದರ್ಭ ಸಾರ್ವಜನಿಕರಿಗೆ ತೊಂದರೆ ಆಗದಂತೆ ವಾಹನ ಪಾರ್ಕಿಂಗ್‌ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕಿದೆ. ಹೊಸ ವರ್ಷಾಚರಣೆ ಸಮಯ ಅಕ್ಕಪಕ್ಕದ ಜನರಿಗೆ ತೊಂದರೆಯಾಗಬಾರದು. ವಿಶೇಷವಾಗಿ ಆಸ್ಪತ್ರೆ, ಅಪಾರ್ಟ್‌ಮೆಂಟ್‌ಗಳಲ್ಲಿ ವಾಸವಾಗಿರುವ ಹಿರಿಯರಿಗೆ, ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು. ಅಹಿತಕರ ಘಟನೆಗಳು ನಡೆ ದರೆ ಸಾರ್ವಜನಿಕರು 112ಕ್ಕೆ ಕರೆ ಮಾಡಿ ಪೊಲೀಸರ ಗಮನಕ್ಕೆ ತರಬಹುದು. ಕಾನೂನು ಕೈಗೆತ್ತಿಕೊಳ್ಳದೆ ಪೊಲೀಸರಿಗೆ ಮಾಹಿತಿ ನೀಡಬೇಕು. ಡ್ರಗ್ಸ್‌, ರೇವ್‌ಪಾರ್ಟಿ, ಅಪಾರ್ಟ್‌ಮೆಂಟ್‌, ಹೋಂಸ್ಟೇಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆ ಯದಂತೆ ವಿಶೇಷ ತಂಡ ಕಾರ್ಯನಿರ್ವಹಿಸಲಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

6 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

6 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

10 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

10 hours ago