ಉಡುಪಿ: ನಗರದ ಹೊಟೇಲ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಉಡುಪಿ ಸರ್ಕಲ್ ಇನ್ಸೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿ ಓರ್ವ ಬ್ರೇಕರ್ ಬಂಧಿಸಿದ್ದು ಹಾಗೂ ಸಂತ್ರಸ್ತ ಯುವತಿಯನ್ನು ರಕ್ಷಣೆ ಮಾಡಲಾಗಿದೆ.
ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ್ ಹೋಟೆಲ್ನಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ಮಾಹಿತಿಯಂತೆ ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಸಮ್ಮರ್ ಪಾರ್ಕ್ ಹೋಟೆಲ್ನ ಸ್ವಾಗತಕಾರ ಶ್ರೀನಿವಾಸ ರವರೊಂದಿಗೆ 2ನೇ ಮಹಡಿಯಲ್ಲಿರುವ ರೂಮ್ ನಂಬ್ರ 308 ಕ್ಕೆ ದಾಳಿ ನಡೆಸಿ ರೂಮ್ ನಲ್ಲಿ ಇದ್ದ ಒಬ್ಬ ಮಹಿಳೆಯನ್ನು ವಿಚಾರಿಸಿದ್ದಾರೆ. ಆಗ ಮಹಿಳೆ ಶರತ್ @ ಮೊಹಮ್ಮದ್ ಫಯಾಜ್ ಎಂಬ ವ್ಯಕ್ತಿ ನೊಂದ ಮಹಿಳೆಯನ್ನು ಉಡುಪಿಗೆ ಕೆಲಸ ಕೊಡಿಸುವುದಾಗಿ ಆ.19 ರಂದು ಕರೆಸಿಕೊಂಡು ರೂಮ್ನ್ನು ಬುಕ್ ಮಾಡಿಸಿಕೊಟ್ಟು ವೇಶ್ಯಾವಾಟಿಕೆ ದಂಧೆಗೆ, ಅಕ್ರಮ ಲಾಭ ಪಡೆಯುವ ಉದ್ದೇಶ ಕರೆದುಕೊಂಡು ಬಂದಿದ್ದಾಗಿ ತಿಳಿಸಿದ್ದಾಳೆ.
ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 37/2025 ಕಲಂ: 143, 3(5) BNS, ಕಲಂ: 3,4,5,6 Immoral Traffic ( Prevention) Act 1956 ರಂತೆ ಪ್ರಕರಣ ದಾಖಲಾಗಿರುತ್ತದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…