ಉಡುಪಿ : ಹೋಮ್ ಗಾರ್ಡ್ ಸಿಬ್ಬಂದಿಗಳಿಗೆ ಮೂರು ತಿಂಗಳಿಂದ ಬಾಕಿ ಇರುವ ವೇತನವನ್ನು ತಕ್ಷಣ ಪಾವತಿಸುವಂತೆ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಒತ್ತಾಯಿಸಿದ್ದಾರೆ.
ಉಡುಪಿಯ ಹೋಮ್ ಗಾರ್ಡ್ ಸಿಬ್ಬಂದಿಯೋರ್ವರು ಪ್ರಮೋದ್ ಮಧ್ವರಾಜ್ ಅವರನ್ನು ಸಂಪರ್ಕಿಸಿ ಕಳೆದ ಮೂರು ತಿಂಗಳಿನಿಂದ ತಮಗೆ ವೇತನ ಸಿಗದಿರುವ ಬಗ್ಗೆ ತಮ್ಮ ಅಳಲನ್ನು ತೋಡಿಕೊಂಡಿದ್ದರು. ಈ ವಿಚಾರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಮಾಜಿ ಶಾಸಕರು ವೇತನ ಬಿಡುಗಡೆಗೆ ಒತ್ತಾಯಿಸಿದ್ದಾರೆ.
“ಕರ್ನಾಟಕ ಪೋಲಿಸ್ ನ ಶಕ್ತಿಗಳಲ್ಲೊಂದಾಗಿರುವ ಹೋಂ ಗಾರ್ಡ್ಸ್ ಸಿಬ್ಬಂದಿಗಳು ಹಗಲಿರುಳು ಪೋಲಿಸ್ ರವರ ಜೊತೆಗೆ ಶ್ರಮಿಸುತ್ತಿದ್ದು , ಕಳೆದ ಮೂರು ತಿಂಗಳಿನಿಂದ ತಮಗೆ ವೇತನ ಸಿಗದಿರುವ ಬಗ್ಗೆ ಹೋಂ ಗಾರ್ಡ್ ಒಬ್ಬರು ನನಗೆ ಕರೆ ಮಾಡಿ ತಿಳಿಸಿದ್ದು ಜಿಲ್ಲಾಡಳಿತದ ಜಿಲ್ಲಾಧಿಕಾರಿಯವರಿಗೆ ಕರೆ ಮಾಡಿ ಸೂಕ್ತ ಕ್ರಮವಹಿಸುವಂತೆ ತಿಳಿಸಿದ್ದೇನೆ ಮತ್ತು ಈ ವಿಚಾರವನ್ನು ಐಎಎಸ್ ಅಧಿಕಾರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಮೇಜರ್ ಮಣಿವಣ್ಣನ್ ರವರ ಗಮನಕ್ಕೂ ತರಲಾಗಿದ್ದು ಈ ಬಗ್ಗೆ ಮೇಜರ್ ಮಣಿವಣ್ಣನ್ ರವರು ತಕ್ಷಣ ಪ್ರತಿಕ್ರಿಯಿಸಿ ಉಡುಪಿ ಜಿಲ್ಲಾಧಿಕಾರಿಯವರ ಜೊತೆಗೆ ಚರ್ಚಿಸಿ ಶೀಘ್ರದಲ್ಲಿ ವೇತನ ಪಾವತಿಗೆ ಕ್ರಮವಹಿಸುವುದಾಗಿ ತಿಳಿಸಿದ್ದಾರೆ ಎಂದು ಮಾಜಿ ಶಾಸಕರು ಬರೆದುಕೊಂಡಿದ್ದಾರೆ.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…