ಉಡುಪಿ: ಮಣಿಪಾಲದ ವಿವಿಧ ಕಡೆಗಳಲ್ಲಿ ಡಿ ಜೆ ಪಾರ್ಟಿ ಆಯೋಜಿಸಿ ಹಿಂದು ಭಾವನೆಗೆ ಧಕ್ಕೆ ತರುವುದನ್ನು ನಿಲ್ಲಿಸುವಂತೆ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಆಗ್ರಹಿಸಿದ್ದಾರೆ
ಹಿಂದೂ ಧರ್ಮದಲ್ಲಿ ಹೋಳಿ ಹಬ್ಬವನ್ನು ವಿಶ್ವದಾದ್ಯಂತ ಹಿಂದೂಗಳು ವಿಶೇಷವಾಗಿ ಅನಾದಿ ಕಾಲದಿಂದಲೂ ಆಚರಿಸಿಕೊಂಡು ಬರುತ್ತಿದ್ದು, ಭಗವಂತ ಶ್ರೀ ಕೃಷ್ಣ ಬಾಲ್ಯದಲ್ಲಿ ಲೋಕಕಂಟಕಿಯಾಗಿ ಹೋಲಿಕಾ ಎಂಬ ರಾಕ್ಷಸಿಯನ್ನು ಸಂಹಾರ ಮಾಡಿ ಲೋಕ ಕಲ್ಯಾಣ ಮಾಡಿದ ಪವಿತ್ರ ದಿನವಾಗಿದೆ. ತಾರಕಾಸುರನ ವಧೆಗೆ ಶಿವ ಪರಮಾತ್ಮನನ್ನು ಎಚ್ಚರಗೊಳಿಸಲು ಮನ್ಮಥ ದಹನವಾದ ಪ್ರತೀಕವಾಗಿ ಕಾಮ ದಹನವನ್ನು ಮಾಡುವ ಪದ್ಧತಿ ಇದೆ .
ಹಾಗಾಗಿ ಹಿಂದೂ ಧಾರ್ಮಿಕ ಕಾರ್ಯಕ್ರಮದ ದಿನದಂದು ಉಡುಪಿ ಜಿಲ್ಲೆಯ ನಗರ ಭಾಗಗಳಲ್ಲಿ ವಿವಿಧ ಕಾರ್ಯಕ್ರಮಗಳು ಆಯೋಜನೆ ಗೊಂಡಿದ್ದು, ಅಲ್ಲಿ ವಿವಿಧ ಡಿಜೆ ಪಾರ್ಟಿ, ಮತ್ತು ಅನೈತಿಕ ಚಟುವಟಿಕೆಗೆ ಕಾರಣವಾಗುವ ಮಾದಕ ದ್ರವ್ಯದ ಜೊತೆಗೆ ಡ್ರಗ್ಸ್ ಉಪಯೋಗವಾಗುವ ಸಾಧ್ಯತೆ ಇದ್ದು ಇದು ಸಮಾಜದ ಸ್ವಾಸ್ಥ್ಯ ಕೆಡಿಸುವ ಜೊತೆಗೆ ಯುವಕ ಯುವತಿಯರು ದಾರಿ ತಪ್ಪಲು ಕಾರಣವಾಗುತ್ತಿದೆ
ಉಡುಪಿ ಜಿಲ್ಲೆ ಶ್ರೀ ಕೃಷ್ಣನ ನೆಲೆಬೀಡು, ಈ ಕೃಷ್ಣನ ನಗರಿಯಲ್ಲಿ ಇಂತಹ ಯಾವುದೇ ಅಕ್ರಮ ಅನೈತಿಕತೆಯ ಕಾರ್ಯಕ್ರಮಕ್ಕೆ ವಿಶ್ವ ಹಿಂದು ಪರಿಷದ್ ಬಜರಂಗದಳ ವಿರೋಧ ವ್ಯಕ್ತ ಪಡಿಸುತ್ತಿದ್ದು ಪೊಲೀಸ್ ಇಲಾಖೆ ಕೂಡ ಇದಕ್ಕೆ ಯಾವುದೇ ಅವಕಾಶ ನೀಡಬಾರದಾಗಿ ವಿಶ್ವ ಹಿಂದು ಪರಿಷದ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಆಗ್ರಹಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…