ಉಡುಪಿ: ಮಣಿಪಾಲದ ವಿವಿಧ ಕಡೆಗಳಲ್ಲಿ ಡಿ ಜೆ ಪಾರ್ಟಿ ಆಯೋಜಿಸಿ ಹಿಂದು ಭಾವನೆಗೆ ಧಕ್ಕೆ ತರುವುದನ್ನು ನಿಲ್ಲಿಸುವಂತೆ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಆಗ್ರಹಿಸಿದ್ದಾರೆ
ಹಿಂದೂ ಧರ್ಮದಲ್ಲಿ ಹೋಳಿ ಹಬ್ಬವನ್ನು ವಿಶ್ವದಾದ್ಯಂತ ಹಿಂದೂಗಳು ವಿಶೇಷವಾಗಿ ಅನಾದಿ ಕಾಲದಿಂದಲೂ ಆಚರಿಸಿಕೊಂಡು ಬರುತ್ತಿದ್ದು, ಭಗವಂತ ಶ್ರೀ ಕೃಷ್ಣ ಬಾಲ್ಯದಲ್ಲಿ ಲೋಕಕಂಟಕಿಯಾಗಿ ಹೋಲಿಕಾ ಎಂಬ ರಾಕ್ಷಸಿಯನ್ನು ಸಂಹಾರ ಮಾಡಿ ಲೋಕ ಕಲ್ಯಾಣ ಮಾಡಿದ ಪವಿತ್ರ ದಿನವಾಗಿದೆ. ತಾರಕಾಸುರನ ವಧೆಗೆ ಶಿವ ಪರಮಾತ್ಮನನ್ನು ಎಚ್ಚರಗೊಳಿಸಲು ಮನ್ಮಥ ದಹನವಾದ ಪ್ರತೀಕವಾಗಿ ಕಾಮ ದಹನವನ್ನು ಮಾಡುವ ಪದ್ಧತಿ ಇದೆ .
ಹಾಗಾಗಿ ಹಿಂದೂ ಧಾರ್ಮಿಕ ಕಾರ್ಯಕ್ರಮದ ದಿನದಂದು ಉಡುಪಿ ಜಿಲ್ಲೆಯ ನಗರ ಭಾಗಗಳಲ್ಲಿ ವಿವಿಧ ಕಾರ್ಯಕ್ರಮಗಳು ಆಯೋಜನೆ ಗೊಂಡಿದ್ದು, ಅಲ್ಲಿ ವಿವಿಧ ಡಿಜೆ ಪಾರ್ಟಿ, ಮತ್ತು ಅನೈತಿಕ ಚಟುವಟಿಕೆಗೆ ಕಾರಣವಾಗುವ ಮಾದಕ ದ್ರವ್ಯದ ಜೊತೆಗೆ ಡ್ರಗ್ಸ್ ಉಪಯೋಗವಾಗುವ ಸಾಧ್ಯತೆ ಇದ್ದು ಇದು ಸಮಾಜದ ಸ್ವಾಸ್ಥ್ಯ ಕೆಡಿಸುವ ಜೊತೆಗೆ ಯುವಕ ಯುವತಿಯರು ದಾರಿ ತಪ್ಪಲು ಕಾರಣವಾಗುತ್ತಿದೆ
ಉಡುಪಿ ಜಿಲ್ಲೆ ಶ್ರೀ ಕೃಷ್ಣನ ನೆಲೆಬೀಡು, ಈ ಕೃಷ್ಣನ ನಗರಿಯಲ್ಲಿ ಇಂತಹ ಯಾವುದೇ ಅಕ್ರಮ ಅನೈತಿಕತೆಯ ಕಾರ್ಯಕ್ರಮಕ್ಕೆ ವಿಶ್ವ ಹಿಂದು ಪರಿಷದ್ ಬಜರಂಗದಳ ವಿರೋಧ ವ್ಯಕ್ತ ಪಡಿಸುತ್ತಿದ್ದು ಪೊಲೀಸ್ ಇಲಾಖೆ ಕೂಡ ಇದಕ್ಕೆ ಯಾವುದೇ ಅವಕಾಶ ನೀಡಬಾರದಾಗಿ ವಿಶ್ವ ಹಿಂದು ಪರಿಷದ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಆಗ್ರಹಿಸಿದ್ದಾರೆ.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…