Featured

ಉಡುಪಿ : 1.5 ವರ್ಷದ ದೀರ್ಘ ರಜೆಯ ಬಳಿಕ ಅಂಗನವಾಡಿಗೆ ಮರಳಿದ ಚಿಣ್ಣರು  – VIshwanews24

ಉಡುಪಿ : 1.5 ವರ್ಷದ ದೀರ್ಘ ರಜೆಯ ಬಳಿಕ ಅಂಗನವಾಡಿಗೆ ಮರಳಿದ ಚಿಣ್ಣರು  – VIshwanews24

ಉಡುಪಿ : ಕೊರೊನಾ ಕಾರಣದಿಂದ ಸುಮಾರು 1.5 ವರ್ಷದಿಂದ ಮುಚ್ಚಲ್ಪಟ್ಟಿದ್ದ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಇಂದು ಆರಂಭಗೊಂಡಿದ್ದು, ಸುಮಾರು 1.5 ವರ್ಷದ ದೀರ್ಘ ರಜೆಯ ಬಳಿಕ ಚಿಣ್ಣರು ಅಂಗನವಾಡಿಗೆ ಮರಳಿದ್ದಾರೆ.

ಉಡುಪಿಯಲ್ಲಿ ಇಂದಿನಿಂದ ಅಂಗನವಾಡಿ ಪ್ರಾರಂಭೋತ್ಸವದ ಹಿನ್ನೆಲೆ ಅಂಗನವಾಡಿ ಸಿಬ್ಬಂದಿಗಳು ಸಿಹಿತಿಂಡಿ, ಗುಲಾಬಿ ಹೂ ನೀಡಿ ಮಕ್ಕಳನ್ನು ಸ್ವಾಗತಿಸಿದರು.

ಈ ಸಂದರ್ಭ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್‌‌‌ ಸಿಇಒ ಅಂಗನವಾಡಿಗೆ ಭೇಟಿ ನೀಡಿದ್ದು, ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್‌ ಸಿಇಒ ಡಾ ನವೀನ್‌ ಭಟ್‌‌, “ಪರಿಸ್ಥಿತಿ ಆಧರಿಸಿ 15 ದಿನಗಳ ಬಳಿಕ ಮಕ್ಕಳಿಗೆ ಪೌಷ್ಟಿಕ ಆಹಾರದ ವ್ಯವಸ್ಥೆ ಪ್ರಾರಂಭಿಸಲಾಗುವುದು” ಎಂದು ತಿಳಿಸಿದರು.

ಅಂಗನವಾಡಿ ಆರಂಭಕ್ಕೂ ಮುನ್ನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಮೊದಲ ಹಂತದಲ್ಲಿ ಬೆಳಗ್ಗೆ 10 ರಿಂದ 12 ರವರೆಗೆ ಮಾತ್ರ ಅಂಗನವಾಡಿಯನ್ನು ತೆರೆಯಲು ನಿರ್ಧರಿಸಿದ್ದು, ಮುಂದಿನ ಸೂಚನೆವರೆಗೆ ಪೂರಕ ಪೌಷ್ಠಿಕ ಆಹಾರವನ್ನು/ಆಹಾರ ಪದಾರ್ಥಗಳನ್ನು ಮನೆಗೆ ನೀಡಲಾಗುವುದು. ಕೇಂದ್ರದಲ್ಲಿ ಆಹಾರ ತಯಾರಿಸುವವರು ಮಾಸ್ಕ್‌‌‌, ಹೆಡ್ ಕ್ಯಾಪ್ ಮತ್ತು ಏಪ್ರನ್ ಧರಿಸುವಂತೆ ಸೂಚನೆ ನೀಡಲಾಗಿದೆ

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 hour ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 hour ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 hour ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

24 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago