ಉಡುಪಿ : ಕೊರೊನಾ ಕಾರಣದಿಂದ ಸುಮಾರು 1.5 ವರ್ಷದಿಂದ ಮುಚ್ಚಲ್ಪಟ್ಟಿದ್ದ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಇಂದು ಆರಂಭಗೊಂಡಿದ್ದು, ಸುಮಾರು 1.5 ವರ್ಷದ ದೀರ್ಘ ರಜೆಯ ಬಳಿಕ ಚಿಣ್ಣರು ಅಂಗನವಾಡಿಗೆ ಮರಳಿದ್ದಾರೆ.
ಉಡುಪಿಯಲ್ಲಿ ಇಂದಿನಿಂದ ಅಂಗನವಾಡಿ ಪ್ರಾರಂಭೋತ್ಸವದ ಹಿನ್ನೆಲೆ ಅಂಗನವಾಡಿ ಸಿಬ್ಬಂದಿಗಳು ಸಿಹಿತಿಂಡಿ, ಗುಲಾಬಿ ಹೂ ನೀಡಿ ಮಕ್ಕಳನ್ನು ಸ್ವಾಗತಿಸಿದರು.
ಈ ಸಂದರ್ಭ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಅಂಗನವಾಡಿಗೆ ಭೇಟಿ ನೀಡಿದ್ದು, ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡರು.
ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಸಿಇಒ ಡಾ ನವೀನ್ ಭಟ್, “ಪರಿಸ್ಥಿತಿ ಆಧರಿಸಿ 15 ದಿನಗಳ ಬಳಿಕ ಮಕ್ಕಳಿಗೆ ಪೌಷ್ಟಿಕ ಆಹಾರದ ವ್ಯವಸ್ಥೆ ಪ್ರಾರಂಭಿಸಲಾಗುವುದು” ಎಂದು ತಿಳಿಸಿದರು.
ಅಂಗನವಾಡಿ ಆರಂಭಕ್ಕೂ ಮುನ್ನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಮೊದಲ ಹಂತದಲ್ಲಿ ಬೆಳಗ್ಗೆ 10 ರಿಂದ 12 ರವರೆಗೆ ಮಾತ್ರ ಅಂಗನವಾಡಿಯನ್ನು ತೆರೆಯಲು ನಿರ್ಧರಿಸಿದ್ದು, ಮುಂದಿನ ಸೂಚನೆವರೆಗೆ ಪೂರಕ ಪೌಷ್ಠಿಕ ಆಹಾರವನ್ನು/ಆಹಾರ ಪದಾರ್ಥಗಳನ್ನು ಮನೆಗೆ ನೀಡಲಾಗುವುದು. ಕೇಂದ್ರದಲ್ಲಿ ಆಹಾರ ತಯಾರಿಸುವವರು ಮಾಸ್ಕ್, ಹೆಡ್ ಕ್ಯಾಪ್ ಮತ್ತು ಏಪ್ರನ್ ಧರಿಸುವಂತೆ ಸೂಚನೆ ನೀಡಲಾಗಿದೆ
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…