Featured

ಉಡುಪಿ: 10 ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಕಟ್ಟಡ ನಿರ್ಮಾಣ ಮಾಲೀಕರಿಗೆ ಪ್ರಮಾಣ ಪತ್ರ ಕಡ್ಡಾಯ – Vishwanews24

10 ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಕಟ್ಟಡ ನಿರ್ಮಾಣ ಮಾಲೀಕರಿಗೆ ಪ್ರಮಾಣ ಪತ್ರ ಕಡ್ಡಾಯ

ಉಡುಪಿ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗದ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕಾಯ್ದೆ 1996 ಮತ್ತು ಕರ್ನಾಟಕ ನಿಯಮಗಳು 2006 ರಡಿ 10 ಕ್ಕಿಂತ ಹೆಚ್ಚಿನ ಕಾರ್ಮಿಕರನ್ನು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಲ್ಲಿ ಕಡ್ಡಾಯವಾಗಿ ಕಟ್ಟಡ ಮಾಲೀಕರು, ನಿಯೋಜಕರು ಹಾಗೂ ಗುತ್ತಿಗೆದಾರರು ಕಟ್ಟಡ ನಿರ್ಮಾಣ ಕಾಮಗಾರಿ ಸಂಸ್ಥೆಯನ್ನಾಗಿ ನೋಂದಾಯಿಸಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕವನ್ನು ಭರಿಸಿ, ನೋಂದಣಿ ಪ್ರಮಾಣ ಪತ್ರವನ್ನು ಕಾರ್ಮಿಕ ಇಲಾಖೆಯಿಂದ ಪಡೆಯುವುದು ಕಡ್ಡಾಯವಾಗಿರುತ್ತದೆ.

ವ್ಯಾಸ್ತವ್ಯದ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ರೂ.10 ಲಕ್ಷ ನಿರ್ಮಾಣ ವೆಚ್ಚ ಮೀರಿದ ಕಟ್ಟಡ ಮತ್ತು ಯಾವುದೇ ವಾಣಿಜ್ಯ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳುವ ಕಟ್ಟಡದ ಮಾಲೀಕರು ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡ ಬಳಿಕ ಸ್ಥಳೀಯ ಸಂಸ್ಥೆಯ ಪರವಾನಗಿ ಪ್ರಾಧಿಕಾರ ಕಛೇರಿಗಳಿಂದ occupancy certificate ಅನ್ನು ಕಟ್ಟಡದ ನಿರ್ಮಾಣ ಮಾಲೀಕರು ಪಡೆಯುವ ಪೂರ್ವದಲ್ಲಿ ಕಾರ್ಮಿಕ ಅಧಿಕಾರಿ ಹಾಗೂ ಸುಂಕ ಮೌಲ್ಯಮಾಪನಾಧಿಕಾರಿಗಳಿಗೆ ಕಟ್ಟಡದ ಮಾಲೀಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಸುಂಕ ಕಾಯ್ದೆಯನ್ವಯ ನಮೂನೆ-1 ಹಾಗೂ ನಮೂನೆ-4 ರಲ್ಲಿ ಭರ್ತಿ ಮಾಡಿದ ಮಾಹಿತಿ ಹಾಗೂ ಅಗತ್ಯ ದಾಖಲಾತಿಯನ್ನು ಸಲ್ಲಿಸಿ, ಸುಂಕ ಮೌಲ್ಯಮಾಪನ ಆದೇಶ ಮಾಡಿಸಿಕೊಂಡು ಸುಂಕದ ಪೂರ್ಣ ಮೊತ್ತ ಪಾವತಿ ಮಾಡಿರುವ ಬಗ್ಗೆ ದೃಢಪತ್ರವನ್ನು ಪಡೆದು ಸ್ಥಳೀಯ ಸಂಸ್ಥೆಯ ಪರವಾನಗಿ ಪ್ರಾಧಿಕಾರ ಕಛೇರಿಗಳಿಂದ occupancy certificate ಅನ್ನು ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

6 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

6 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

6 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

7 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

7 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

7 hours ago