Featured

ಉಡುಪಿ : ನಗರವನ್ನು ಅಭಿವೃದ್ಧಿ ಮಾಡುವುದು ದೊಡ್ಡ ಸಂಗತಿಯೇ ಅಲ್ಲ, ಅಧಿಕಾರಿಗಳು ಒತ್ತಡ ನಿಭಾಯಿಸಿಕೊಂಡು ಕೆಲಸ ನಿರ್ವಹಿಸಿದರೆ ಎಲ್ಲವೂ ಸಾಧ್ಯ: ನೂತನ ಜಿಲ್ಲಾಧಿಕಾರಿ -Vishwanews24

ಉಡುಪಿ: ನಗರಸಭೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ಕೆಲಸ ಮಾಡುವ ಮನಸ್ಥಿತಿಯಲ್ಲಿ ಇರಬೇಕು. 10 ಗಂಟೆಗೆ ಕೆಲಸಕ್ಕೆ ಬರುವ ಅಧಿಕಾರಿಗಳು ಬೇಕಿಲ್ಲ.  ಮೈಸೂರು ಜಿಲ್ಲೆಯನ್ನು ನಂಬರ್‌ ವನ್‌ ಮಾಡಿದಂತೆ ಉಡುಪಿಯನ್ನೂ ಮಾಡಲು ಸಾಧ್ಯವಿದೆ. ಇದಕ್ಕಾಗಿ ಅಧಿಕಾರಿಗಳು ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ನೂತನ ಜಿಲ್ಲಾಧಿಕಾರಿ, ನಗರಸಭೆಯ ಆಡಳಿತಾಧಿಕಾರಿ ಜಿ.ಜಗದೀಶ್‌ ಅಧಿಕಾರಿ ಗಳಿಗೆ ಖಡಕ್‌ ಸೂಚನೆ ನೀಡಿದರು.

ಗುರುವಾರ ಶಾಸಕ ರಘುಪತಿ ಕೆ.ಭಟ್‌ ನೇತೃತ್ವದಲ್ಲಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಗರಸಭಾ ಚುನಾ ಯಿತ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಎಚ್ಚರಿಕೆ ನೀಡಿದರು.

ವಿವಿಧೆಡೆ ಅಧಿಕಾರಿಯಾಗಿ ಕೆಲಸ ಮಾಡಿದ ಅನುಭವವಿದೆ. ಉಡುಪಿ ಜಿಲ್ಲೆಯಲ್ಲಿಯೂ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದೇನೆ. ನಗರಾಭಿವೃದ್ಧಿ ಬಗ್ಗೆ ಹಲವು ಅನುಭವಗಳಿವೆ. ಈ ನಗರವನ್ನು ಅಭಿವೃದ್ಧಿ ಮಾಡುವುದು ದೊಡ್ಡ ಸಂಗತಿಯೇ ಅಲ್ಲ. ಅಧಿಕಾರಿಗಳು ಒತ್ತಡ ನಿಭಾಯಿಸಿಕೊಂಡು ಕೆಲಸ ನಿರ್ವಹಿಸಿದರೆ ಎಲ್ಲವೂ ಸಾಧ್ಯ ಎಂದರು.

ನಗರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸಾಮಾನ್ಯ ಕೆಲಸಕಾರ್ಯ ಗಳಿಗೆ ಜನರಿಗಿಂತಲೂ ಯಂತ್ರೋಪಕರಣಗಳನ್ನು ಬಳಸಿಕೊಳ್ಳಬೇಕು. ನಗರ
ಸಭೆಯ ಅಧಿಕಾರಿಗಳು ಚುನಾಯಿತ ಜನಪ್ರತಿನಿಧಿಗಳು ಸಹಿತ ಸಾರ್ವಜನಿಕ ರೊಂದಿಗೆ ಔಚಿತ್ಯದಿಂದ ವರ್ತಿಸಬೇಕು. ಇದಕ್ಕೆ ಆಯುಕ್ತರು ವ್ಯವಸ್ಥೆ ಕಲ್ಪಿಸಬೇಕು. ನಗರವನ್ನು ಅಭಿವೃದ್ಧಿಗೊಳಿಸಲು ಹಲವಾರು ಯೋಜನೆಗಳನ್ನು ರೂಪಿಸಲಾಗುವುದು. ಮರಳು ಸಮಸ್ಯೆ ನಿವಾರಣೆಗೆ ಶ್ರಮಿಸಲಾಗುವುದು ಎಂದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago