Featured

ಉಡುಪಿ : ನಗರವನ್ನು ಅಭಿವೃದ್ಧಿ ಮಾಡುವುದು ದೊಡ್ಡ ಸಂಗತಿಯೇ ಅಲ್ಲ, ಅಧಿಕಾರಿಗಳು ಒತ್ತಡ ನಿಭಾಯಿಸಿಕೊಂಡು ಕೆಲಸ ನಿರ್ವಹಿಸಿದರೆ ಎಲ್ಲವೂ ಸಾಧ್ಯ: ನೂತನ ಜಿಲ್ಲಾಧಿಕಾರಿ -Vishwanews24

ಉಡುಪಿ: ನಗರಸಭೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ಕೆಲಸ ಮಾಡುವ ಮನಸ್ಥಿತಿಯಲ್ಲಿ ಇರಬೇಕು. 10 ಗಂಟೆಗೆ ಕೆಲಸಕ್ಕೆ ಬರುವ ಅಧಿಕಾರಿಗಳು ಬೇಕಿಲ್ಲ.  ಮೈಸೂರು ಜಿಲ್ಲೆಯನ್ನು ನಂಬರ್‌ ವನ್‌ ಮಾಡಿದಂತೆ ಉಡುಪಿಯನ್ನೂ ಮಾಡಲು ಸಾಧ್ಯವಿದೆ. ಇದಕ್ಕಾಗಿ ಅಧಿಕಾರಿಗಳು ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ನೂತನ ಜಿಲ್ಲಾಧಿಕಾರಿ, ನಗರಸಭೆಯ ಆಡಳಿತಾಧಿಕಾರಿ ಜಿ.ಜಗದೀಶ್‌ ಅಧಿಕಾರಿ ಗಳಿಗೆ ಖಡಕ್‌ ಸೂಚನೆ ನೀಡಿದರು.

ಗುರುವಾರ ಶಾಸಕ ರಘುಪತಿ ಕೆ.ಭಟ್‌ ನೇತೃತ್ವದಲ್ಲಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಗರಸಭಾ ಚುನಾ ಯಿತ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಎಚ್ಚರಿಕೆ ನೀಡಿದರು.

ವಿವಿಧೆಡೆ ಅಧಿಕಾರಿಯಾಗಿ ಕೆಲಸ ಮಾಡಿದ ಅನುಭವವಿದೆ. ಉಡುಪಿ ಜಿಲ್ಲೆಯಲ್ಲಿಯೂ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದೇನೆ. ನಗರಾಭಿವೃದ್ಧಿ ಬಗ್ಗೆ ಹಲವು ಅನುಭವಗಳಿವೆ. ಈ ನಗರವನ್ನು ಅಭಿವೃದ್ಧಿ ಮಾಡುವುದು ದೊಡ್ಡ ಸಂಗತಿಯೇ ಅಲ್ಲ. ಅಧಿಕಾರಿಗಳು ಒತ್ತಡ ನಿಭಾಯಿಸಿಕೊಂಡು ಕೆಲಸ ನಿರ್ವಹಿಸಿದರೆ ಎಲ್ಲವೂ ಸಾಧ್ಯ ಎಂದರು.

ನಗರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸಾಮಾನ್ಯ ಕೆಲಸಕಾರ್ಯ ಗಳಿಗೆ ಜನರಿಗಿಂತಲೂ ಯಂತ್ರೋಪಕರಣಗಳನ್ನು ಬಳಸಿಕೊಳ್ಳಬೇಕು. ನಗರ
ಸಭೆಯ ಅಧಿಕಾರಿಗಳು ಚುನಾಯಿತ ಜನಪ್ರತಿನಿಧಿಗಳು ಸಹಿತ ಸಾರ್ವಜನಿಕ ರೊಂದಿಗೆ ಔಚಿತ್ಯದಿಂದ ವರ್ತಿಸಬೇಕು. ಇದಕ್ಕೆ ಆಯುಕ್ತರು ವ್ಯವಸ್ಥೆ ಕಲ್ಪಿಸಬೇಕು. ನಗರವನ್ನು ಅಭಿವೃದ್ಧಿಗೊಳಿಸಲು ಹಲವಾರು ಯೋಜನೆಗಳನ್ನು ರೂಪಿಸಲಾಗುವುದು. ಮರಳು ಸಮಸ್ಯೆ ನಿವಾರಣೆಗೆ ಶ್ರಮಿಸಲಾಗುವುದು ಎಂದರು.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

20 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago