Featured

ಉಡುಪಿ : ನಗರವನ್ನು ಅಭಿವೃದ್ಧಿ ಮಾಡುವುದು ದೊಡ್ಡ ಸಂಗತಿಯೇ ಅಲ್ಲ, ಅಧಿಕಾರಿಗಳು ಒತ್ತಡ ನಿಭಾಯಿಸಿಕೊಂಡು ಕೆಲಸ ನಿರ್ವಹಿಸಿದರೆ ಎಲ್ಲವೂ ಸಾಧ್ಯ: ನೂತನ ಜಿಲ್ಲಾಧಿಕಾರಿ -Vishwanews24

ಉಡುಪಿ: ನಗರಸಭೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ಕೆಲಸ ಮಾಡುವ ಮನಸ್ಥಿತಿಯಲ್ಲಿ ಇರಬೇಕು. 10 ಗಂಟೆಗೆ ಕೆಲಸಕ್ಕೆ ಬರುವ ಅಧಿಕಾರಿಗಳು ಬೇಕಿಲ್ಲ.  ಮೈಸೂರು ಜಿಲ್ಲೆಯನ್ನು ನಂಬರ್‌ ವನ್‌ ಮಾಡಿದಂತೆ ಉಡುಪಿಯನ್ನೂ ಮಾಡಲು ಸಾಧ್ಯವಿದೆ. ಇದಕ್ಕಾಗಿ ಅಧಿಕಾರಿಗಳು ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ನೂತನ ಜಿಲ್ಲಾಧಿಕಾರಿ, ನಗರಸಭೆಯ ಆಡಳಿತಾಧಿಕಾರಿ ಜಿ.ಜಗದೀಶ್‌ ಅಧಿಕಾರಿ ಗಳಿಗೆ ಖಡಕ್‌ ಸೂಚನೆ ನೀಡಿದರು.

ಗುರುವಾರ ಶಾಸಕ ರಘುಪತಿ ಕೆ.ಭಟ್‌ ನೇತೃತ್ವದಲ್ಲಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಗರಸಭಾ ಚುನಾ ಯಿತ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಎಚ್ಚರಿಕೆ ನೀಡಿದರು.

ವಿವಿಧೆಡೆ ಅಧಿಕಾರಿಯಾಗಿ ಕೆಲಸ ಮಾಡಿದ ಅನುಭವವಿದೆ. ಉಡುಪಿ ಜಿಲ್ಲೆಯಲ್ಲಿಯೂ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದೇನೆ. ನಗರಾಭಿವೃದ್ಧಿ ಬಗ್ಗೆ ಹಲವು ಅನುಭವಗಳಿವೆ. ಈ ನಗರವನ್ನು ಅಭಿವೃದ್ಧಿ ಮಾಡುವುದು ದೊಡ್ಡ ಸಂಗತಿಯೇ ಅಲ್ಲ. ಅಧಿಕಾರಿಗಳು ಒತ್ತಡ ನಿಭಾಯಿಸಿಕೊಂಡು ಕೆಲಸ ನಿರ್ವಹಿಸಿದರೆ ಎಲ್ಲವೂ ಸಾಧ್ಯ ಎಂದರು.

ನಗರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸಾಮಾನ್ಯ ಕೆಲಸಕಾರ್ಯ ಗಳಿಗೆ ಜನರಿಗಿಂತಲೂ ಯಂತ್ರೋಪಕರಣಗಳನ್ನು ಬಳಸಿಕೊಳ್ಳಬೇಕು. ನಗರ
ಸಭೆಯ ಅಧಿಕಾರಿಗಳು ಚುನಾಯಿತ ಜನಪ್ರತಿನಿಧಿಗಳು ಸಹಿತ ಸಾರ್ವಜನಿಕ ರೊಂದಿಗೆ ಔಚಿತ್ಯದಿಂದ ವರ್ತಿಸಬೇಕು. ಇದಕ್ಕೆ ಆಯುಕ್ತರು ವ್ಯವಸ್ಥೆ ಕಲ್ಪಿಸಬೇಕು. ನಗರವನ್ನು ಅಭಿವೃದ್ಧಿಗೊಳಿಸಲು ಹಲವಾರು ಯೋಜನೆಗಳನ್ನು ರೂಪಿಸಲಾಗುವುದು. ಮರಳು ಸಮಸ್ಯೆ ನಿವಾರಣೆಗೆ ಶ್ರಮಿಸಲಾಗುವುದು ಎಂದರು.

 

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

7 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

2 days ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

2 days ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

2 days ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

2 days ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

2 days ago