ಹೆಬ್ರಿ : ಮಹತ್ವದ ಬೆಳವಣಿಗೆಯಲ್ಲಿ ಹೆಬ್ರಿ ತಾಲೂಕಿನ ಕಬ್ಬಿನಾಲೆಯಲ್ಲಿ ನಡೆದ ಎನ್ಕೌಂಟರ್ ನಲ್ಲಿ ನಕ್ಸಲ್ ನಿಗ್ರಹ ಪಡೆ(ಎಎನ್ಎಫ್) ನಕ್ಸಲ್ ಮುಖಂಡ ವಿಕ್ರಂಗೌಡನನ್ನು ಹತ್ಯೆ ಮಾಡಿದೆ. ಈ ಘಟನೆಯು ಉಡುಪಿ ಜಿಲ್ಲೆಯಲ್ಲಿ 13 ವರ್ಷಗಳ ನಂತರ ವರದಿಯಾದ ಮೊದಲ ಎನ್ಕೌಂಟರ್ ಆಗಿದೆ.
ಕಳೆದ ಕೆಲದಿನಗಳಿಂದ ಹೆಬ್ರಿ, ಶೃಂಗೇರಿ ಭಾಗದಲ್ಲಿ ನಕ್ಸಲ ಚಲನವಲನದ ಬಗ್ಗೆ ಎಎನ್ಎಫ್ಗೆ ಮಾಹಿತಿ ಲಭ್ಯವಾಗಿತ್ತು. ಈ ನಡುವೆ ಎಎನ್ಎಫ್ ತಂಡ ನಿನ್ನೆ ತಂಡ ಕೂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಮೂವರು ನಕಕ್ಸಲರ ತಂಡ ಇರುವುದನ್ನು ಪತ್ತೆ ಮಾಡಿದೆ. ಈ ವೇಳೆ ನಡೆದ ಶೂಟೌಟ್ನಲ್ಲಿ ಓರ್ವ ಹತನಾಗಿದ್ದು, ಇನ್ನೂ ಇಬ್ಬರು ನಕ್ಸಲರು ಕಾಡಿನಲ್ಲಿ ಪರಾರಿಯಾಗಿದ್ದಾರೆ. ಈ ಶೂಟೌಟ್ನಲ್ಲಿ ವಿಕ್ರಂಗೌಡ ಎನ್ಕೌಂಟರ್ ಆಗಿದ್ದಾನೆ. ಹೆಬ್ರಿ ವ್ಯಾಪ್ತಿಯ ಪೀತೆ ಬೈಲ್ ಎಂಬಲ್ಲಿ ಘಟನೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಎನ್ಕೌಂಟರ್ ನಡೆದಾಗ ಅಗತ್ಯ ಸಾಮಗ್ರಿಗಳನ್ನು ಪಡೆಯಲು ಸೋಮವಾರ ತಡರಾತ್ರಿ ನಕ್ಸಲ್ ತಂಡ ಕಬ್ಬಿನಾಲೆ ಗ್ರಾಮಕ್ಕೆ ಭೇಟಿ ನೀಡಿತ್ತು ಎನ್ನಲಾಗಿದೆ. ನಕ್ಸಲ್ ಚಲನವಲನಗಳ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಬಳಿಕ ಎಎನ್ಎಫ್ ಈ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…