ಹೆಬ್ರಿ : ಮಹತ್ವದ ಬೆಳವಣಿಗೆಯಲ್ಲಿ ಹೆಬ್ರಿ ತಾಲೂಕಿನ ಕಬ್ಬಿನಾಲೆಯಲ್ಲಿ ನಡೆದ ಎನ್ಕೌಂಟರ್ ನಲ್ಲಿ ನಕ್ಸಲ್ ನಿಗ್ರಹ ಪಡೆ(ಎಎನ್ಎಫ್) ನಕ್ಸಲ್ ಮುಖಂಡ ವಿಕ್ರಂಗೌಡನನ್ನು ಹತ್ಯೆ ಮಾಡಿದೆ. ಈ ಘಟನೆಯು ಉಡುಪಿ ಜಿಲ್ಲೆಯಲ್ಲಿ 13 ವರ್ಷಗಳ ನಂತರ ವರದಿಯಾದ ಮೊದಲ ಎನ್ಕೌಂಟರ್ ಆಗಿದೆ.
ಕಳೆದ ಕೆಲದಿನಗಳಿಂದ ಹೆಬ್ರಿ, ಶೃಂಗೇರಿ ಭಾಗದಲ್ಲಿ ನಕ್ಸಲ ಚಲನವಲನದ ಬಗ್ಗೆ ಎಎನ್ಎಫ್ಗೆ ಮಾಹಿತಿ ಲಭ್ಯವಾಗಿತ್ತು. ಈ ನಡುವೆ ಎಎನ್ಎಫ್ ತಂಡ ನಿನ್ನೆ ತಂಡ ಕೂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಮೂವರು ನಕಕ್ಸಲರ ತಂಡ ಇರುವುದನ್ನು ಪತ್ತೆ ಮಾಡಿದೆ. ಈ ವೇಳೆ ನಡೆದ ಶೂಟೌಟ್ನಲ್ಲಿ ಓರ್ವ ಹತನಾಗಿದ್ದು, ಇನ್ನೂ ಇಬ್ಬರು ನಕ್ಸಲರು ಕಾಡಿನಲ್ಲಿ ಪರಾರಿಯಾಗಿದ್ದಾರೆ. ಈ ಶೂಟೌಟ್ನಲ್ಲಿ ವಿಕ್ರಂಗೌಡ ಎನ್ಕೌಂಟರ್ ಆಗಿದ್ದಾನೆ. ಹೆಬ್ರಿ ವ್ಯಾಪ್ತಿಯ ಪೀತೆ ಬೈಲ್ ಎಂಬಲ್ಲಿ ಘಟನೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಎನ್ಕೌಂಟರ್ ನಡೆದಾಗ ಅಗತ್ಯ ಸಾಮಗ್ರಿಗಳನ್ನು ಪಡೆಯಲು ಸೋಮವಾರ ತಡರಾತ್ರಿ ನಕ್ಸಲ್ ತಂಡ ಕಬ್ಬಿನಾಲೆ ಗ್ರಾಮಕ್ಕೆ ಭೇಟಿ ನೀಡಿತ್ತು ಎನ್ನಲಾಗಿದೆ. ನಕ್ಸಲ್ ಚಲನವಲನಗಳ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಬಳಿಕ ಎಎನ್ಎಫ್ ಈ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…