ಹೆಬ್ರಿ : ಮಹತ್ವದ ಬೆಳವಣಿಗೆಯಲ್ಲಿ ಹೆಬ್ರಿ ತಾಲೂಕಿನ ಕಬ್ಬಿನಾಲೆಯಲ್ಲಿ ನಡೆದ ಎನ್ಕೌಂಟರ್ ನಲ್ಲಿ ನಕ್ಸಲ್ ನಿಗ್ರಹ ಪಡೆ(ಎಎನ್ಎಫ್) ನಕ್ಸಲ್ ಮುಖಂಡ ವಿಕ್ರಂಗೌಡನನ್ನು ಹತ್ಯೆ ಮಾಡಿದೆ. ಈ ಘಟನೆಯು ಉಡುಪಿ ಜಿಲ್ಲೆಯಲ್ಲಿ 13 ವರ್ಷಗಳ ನಂತರ ವರದಿಯಾದ ಮೊದಲ ಎನ್ಕೌಂಟರ್ ಆಗಿದೆ.
ಕಳೆದ ಕೆಲದಿನಗಳಿಂದ ಹೆಬ್ರಿ, ಶೃಂಗೇರಿ ಭಾಗದಲ್ಲಿ ನಕ್ಸಲ ಚಲನವಲನದ ಬಗ್ಗೆ ಎಎನ್ಎಫ್ಗೆ ಮಾಹಿತಿ ಲಭ್ಯವಾಗಿತ್ತು. ಈ ನಡುವೆ ಎಎನ್ಎಫ್ ತಂಡ ನಿನ್ನೆ ತಂಡ ಕೂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಮೂವರು ನಕಕ್ಸಲರ ತಂಡ ಇರುವುದನ್ನು ಪತ್ತೆ ಮಾಡಿದೆ. ಈ ವೇಳೆ ನಡೆದ ಶೂಟೌಟ್ನಲ್ಲಿ ಓರ್ವ ಹತನಾಗಿದ್ದು, ಇನ್ನೂ ಇಬ್ಬರು ನಕ್ಸಲರು ಕಾಡಿನಲ್ಲಿ ಪರಾರಿಯಾಗಿದ್ದಾರೆ. ಈ ಶೂಟೌಟ್ನಲ್ಲಿ ವಿಕ್ರಂಗೌಡ ಎನ್ಕೌಂಟರ್ ಆಗಿದ್ದಾನೆ. ಹೆಬ್ರಿ ವ್ಯಾಪ್ತಿಯ ಪೀತೆ ಬೈಲ್ ಎಂಬಲ್ಲಿ ಘಟನೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಎನ್ಕೌಂಟರ್ ನಡೆದಾಗ ಅಗತ್ಯ ಸಾಮಗ್ರಿಗಳನ್ನು ಪಡೆಯಲು ಸೋಮವಾರ ತಡರಾತ್ರಿ ನಕ್ಸಲ್ ತಂಡ ಕಬ್ಬಿನಾಲೆ ಗ್ರಾಮಕ್ಕೆ ಭೇಟಿ ನೀಡಿತ್ತು ಎನ್ನಲಾಗಿದೆ. ನಕ್ಸಲ್ ಚಲನವಲನಗಳ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಬಳಿಕ ಎಎನ್ಎಫ್ ಈ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…