Featured

ಉಡುಪಿ: 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಮುಂಜಾಗ್ರತಾ ಡೋಸ್ ಲಸಿಕೆ ಪಡೆಯುವುದು ಅಗತ್ಯ – VIshwanews24

ಉಡುಪಿ: 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಮುಂಜಾಗ್ರತಾ ಡೋಸ್ ಲಸಿಕೆ ಪಡೆಯುವುದು ಅಗತ್ಯ..

ಉಡುಪಿ: ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ ಹಾಗೂ ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್ – 19 4ನೇ ಅಲೆ ಪ್ರಕರಣಗಳು ಹೆಚ್ಚುತ್ತಿದ್ದು, ಇದರಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಮುಂಜಾಗ್ರತಾ ಡೋಸ್ ಲಸಿಕೆ ಪಡೆಯುವುದು ಅಗತ್ಯವಾಗಿದೆ.

ಜಿಲ್ಲೆಯಲ್ಲಿರುವ 18 ವರ್ಷ ಮೇಲ್ಪಟ್ಟವರಲ್ಲಿ 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ದಾಟಿದವರು ಸಮೀಪದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯ ಬಗ್ಗೆ ಖಚಿತಪಡಿಸಿಕೊಂಡು ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ ಲಸಿಕೆ ಪಡೆಯಬಹುದಾಗಿದೆ.

ಜಿಲ್ಲೆಯಲ್ಲಿರುವ 15 ರಿಂದ 17 ವರ್ಷ ಪ್ರಾಯದ ಶಾಲಾ ಮಕ್ಕಳಲ್ಲಿ ಕೋವ್ಯಾಕ್ಸಿನ್ ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಇದ್ದಲ್ಲಿ ಶಾಲೆಗೆ ಸಂಬ0ಧಪಟ್ಟ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯ ಬಗ್ಗೆ ಖಚಿತಪಡಿಸಿಕೊಂಡು ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ ಲಸಿಕೆ ಪಡೆಯಬೇಕು.

ಪ್ರಸ್ತುತ ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಮಾತ್ರ ಲಭ್ಯವಿದ್ದು, ಕೋವಿಶೀಲ್ಡ್ ಲಸಿಕೆಯು ಲಭ್ಯವಿರುವುದಿಲ್ಲ. ಕೋವಿಶೀಲ್ಡ್ ಲಸಿಕೆಯು ಜಿಲ್ಲೆಗೆ ಸರಬರಾಜಾದ ತಕ್ಷಣ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

9 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

9 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

9 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

9 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

9 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

10 hours ago