ಉಡುಪಿ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿAಗ್ ಘಟಕ ಬೆಂಗಳೂರು, ಜಿಲ್ಲಾಸ್ಪತ್ರೆ ಉಡುಪಿ ಇವರ ವತಿಯಿಂದ, 250 ಹಾಸಿಗೆಗಳ ಜಿಲ್ಲಾ ಆಸ್ಪತ್ರೆ ಉಡುಪಿಯ ನೂತನ ಕಟ್ಟಡದ ಶಂಕುಸ್ಥಾಪನಾ ಸಮಾರಂಭವು ಆಗಸ್ಟ್ 12 ರಂದು ಮಧ್ಯಾಹ್ನ 3.30 ಕ್ಕೆ ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆಯಲಿದೆ.
ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಬಿ.ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದು, ಶಾಸಕ ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ|| ಕೆ.ಸುಧಾಕರ್ , ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನೀಲ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ರಾಜ್ಯಸಭಾ ಸದಸ್ಯ ಓಸ್ಕರ್ ಫೆರ್ನಾಂಡಿಸ್, ಸಂಸದ ಬಿ.ವೈ ರಾಘವೇಂದ್ರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್ ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಚಂದ್ರ್ರ ಶೆಟ್ಟಿ, ಆಯನೂರು ಮಂಜುನಾಥ್, ಎಸ್.ಎಲ್ ಬೋಜೇಗೌಡ, ಡಾ.ತೇಜಸ್ವಿನಿ ಗೌಡ, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎ.ರಾಘವೇಂದ್ರ ಕಿಣಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಭಾಗವಹಿಸಲಿದ್ದಾರೆ.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…