ಉಡುಪಿ: 2003ರ ನ.17ರಂದು ರಾತ್ರಿ ನಟ್ಟಿರುಳಿನಲ್ಲಿ ರಾಮಪ್ಪ ಪೂಜಾರಿ ಎಂಬವರ ಮನೆಯಲ್ಲಿ ನಡೆದ ಪೊಲೀಸ್ ಇಲಾಖೆಯ ಈದು ನಕ್ಸಲ್ ಎನ್ಕೌಂಟರ್ನಿಂದ ಸಂಪೂರ್ಣ ಶಿಥಿಲಗೊಂಡ ಮನೆಗೆ ಇದುವರೆಗೆ ನಯಾಪೈಸೆ ಪರಿಹಾರವನ್ನು ಪೊಲೀಸ್ ಇಲಾಖೆ ಸೇರಿದಂತೆ ಯಾವುದೇ ಇಲಾಖೆಯೂ ನೀಡಿಲ್ಲ ಎಂದು ಮನೆಯ ಯಜಮಾನರಾದ ರಾಮಪ್ಪ ಪೂಜಾರಿ ಅವರ ಮಗ ಪ್ರಶಾಂತ ಪೂಜಾರಿ ಅಸಮಾಧಾನ ಹೊರಹಾಕಿದ್ದಾರೆ.
ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಗುಂಡಿನ ಚಕಮಕಿ ವೇಳೆ ನಮ್ಮ ಮನೆ ಸಂಪೂರ್ಣ ಶಿಥಿಲವಾಗಿತ್ತು. ಮನೆಯನ್ನು ನಿರ್ಮಿಸಿಕೊಡುವುದಾಗಿ ಪೊಲೀಸ್ ಇಲಾಖೆ ಭರವಸೆ ನೀಡಿತು. ಸ್ಥಳಕ್ಕೆ ಭೇಟಿ ನೀಡಿದ್ದ ಅಂದಿನ ಸರಕಾರ ಹಾಗೂ ಅಧಿಕಾರಿಗಳು ನೂತನ ಮನೆ ನಿರ್ಮಿಸಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆಯನ್ನು ಮೌಖಿಕವಾಗಿ ನೀಡಿದ್ದರು ಎಂದು ಪ್ರಶಾಂತ್ ಪೂಜಾರಿ ತಿಳಿಸಿದರು.
ಎನ್ಕೌಂಟರ್ ನಡೆದ ದಿನಗಳಲ್ಲಿ ವಿವಿಧ ಸಚಿವರು, ಜನಪ್ರತಿನಿಧಿಗಳು, ರಾಜಕಾರಣಿಗಳು ಮನೆಯ ಮುಂದೆ ಬಂದು ಸಾಂತ್ವನ ಹೇಳಿದ್ದರು. ಆಗಿನ ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ಚಿರಂಜೀವಿ ಸಿಂಗ್ ಸಹ ಮನೆಗೆ ಬಂದು ಪರಿಹಾರದ ಭರವಸೆ ನೀಡಿದ್ದರು. ಆದರೆ ಈವರೆಗೆ ಯಾವುದೂ ಈಡೇರಿಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಗ್ರಾಪಂನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಪುರುಷೋತ್ತಮ್, ಈದು ಗ್ರಾಮ ಅರಣ್ಯ ಸಮಿತಿಯ ರಾಜು ಪೂಜಾರಿ, ಸುಧಾಕರ ಪೂಜಾರಿ, ರಾಮಪ್ಪ ಪೂಜಾರಿ ಅವರ ಮಗ ಯಶೋಧರ ಉಪಸ್ಥಿತರಿದ್ದರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…