ಉಡುಪಿ : 28 ಗಂಟೆಗಳ ನಿರಂತರ ಗಾಯನದ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಮುಂದಾದ ಖ್ಯಾತ ಗಾಯಕ ವಿದ್ವಾನ್ ಯಶವಂತ್ ಎಂ.ಜಿ. – vishwanews24
ಉಡುಪಿ : 28 ಗಂಟೆಗಳ ನಿರಂತರ ಗಾಯನದ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಮುಂದಾದ ಖ್ಯಾತ ಗಾಯಕ ವಿದ್ವಾನ್ ಯಶವಂತ್ ಎಂ.ಜಿ.
ಉಡುಪಿ : ಭಾರತದ ಏಕತೆ, ವೈವಿಧ್ಯತೆ ಹಾಗೂ ಭಾಷಾ ಸಾಮರಸ್ಯವನ್ನು ಸಾರುವ ಉದ್ದೇಶದಿಂದ ಖ್ಯಾತ ಗಾಯಕ ವಿದ್ವಾನ್ ಯಶವಂತ್ ಎಂ.ಜಿ. ಅವರು ವಿಶಿಷ್ಟ ವಿಶ್ವ ದಾಖಲೆ ಪ್ರಯತ್ನಕ್ಕೆ ಮುಂದಾಗಿದ್ದಾರೆ.
‘ಏಕ್ ಭಾರತ್, ಶ್ರೇಷ್ಠ ಭಾರತ್’ ಪರಿಕಲ್ಪನೆಯ ಆಧಾರದ ಮೇಲೆ ನಡೆಯಲಿರುವ ಈ ವಿಶ್ವ ದಾಖಲೆ ಕಾರ್ಯಕ್ರಮದ ಪೋಸ್ಟರ್ನ್ನು ಕೆಪಿಸಿಸಿ ಕರ್ನಾಟಕ ಕಾರ್ಯದರ್ಶಿ ಮಿಥುನ್ ರೈ ಬಿಡುಗಡೆ ಮಾಡಿ, ಯಶವಂತ್ ಎಂ.ಜಿ. ಅವರ ವಿಶಿಷ್ಟ ಪ್ರಯತ್ನಕ್ಕೆ ಶುಭ ಹಾರೈಸಿದರು.
ಕರ್ನಾಟಕದ ಗ್ಯಾರಂಟಿ ಮಾಡೆಲ್ ದೇಶದ ಎಲ್ಲೆಲ್ಲೂ ಇದೆ : ಸಿಎಂ ಡಿಕೆ ಶಿ – vishwanews24
ಈ ಸಂದರ್ಭದಲ್ಲಿ ಮಾತನಾಡಿದ ಮಿಥುನ್ ರೈ, ಭಾರತದ ವೈವಿಧ್ಯಮಯ ಭಾಷಾ ಹಾಗೂ ಸಾಂಸ್ಕೃತಿಕ ಪರಂಪರೆಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಇದು ವಿಶಿಷ್ಟ ಪ್ರಯತ್ನವಾಗಿದೆ. ಸಂಗೀತದ ಮೂಲಕ ದೇಶದ ಏಕತೆ ಹಾಗೂ ಭಾಷಾ ವೈವಿಧ್ಯತೆಯನ್ನು ಅನಾವರಣಗೊಳಿಸುವ ಯಶವಂತ್ ಎಂ.ಜಿ. ಅವರ ಪ್ರಯತ್ನ ಯಶಸ್ವಿಯಾಗಲಿ ಎಂದು ಅವರು ಹಾರೈಸಿದರು.

ಅಕ್ಟೋಬರ್ 28 ಮತ್ತು 29ರಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ವಿದ್ವಾನ್ ಯಶವಂತ್ ಎಂ.ಜಿ. ಅವರು ಸತತ 28 ಗಂಟೆಗಳ ಕಾಲ ಸಂಗೀತ ಕಾರ್ಯಕ್ರಮ ನಡೆಸಲಿದ್ದು, ಭಾರತದ 28 ರಾಜ್ಯಗಳು ಹಾಗೂ 28 ಭಾಷೆಗಳನ್ನು ಆಧರಿಸಿದ ಹಾಡುಗಳನ್ನು ಪ್ರಸ್ತುತಪಡಿಸಲಿದ್ದಾರೆ.
ಮುಲ್ಕಿ: ಯುವಕ ಮೃತ್ಯು ಪ್ರಕರಣ; ಕೊಲೆ ಶಂಕಿಸಿ ತಂದೆಯಿಂದ ದೂರು ದಾಖಲು – vishwanews24
ಸಂಗೀತದ ಮೂಲಕ ಭಾರತದ ಏಕತೆ, ಸಮಗ್ರತೆ ಹಾಗೂ ಶ್ರೀಮಂತ ಭಾಷಾ ವೈವಿಧ್ಯತೆಯನ್ನು ಸಾರುವ ಈ ಐತಿಹಾಸಿಕ ಪ್ರಯತ್ನ ದೇಶದ ಸಾಂಸ್ಕೃತಿಕ ಕ್ಷೇತ್ರದಲ್ಲಿ ವಿಶಿಷ್ಟ ಕಾರ್ಯಕ್ರಮವಾಗಿ ಮೂಡಿಬರುವ ನಿರೀಕ್ಷೆಯಿದೆ.
ಈ ಸಂದರ್ಭದಲ್ಲಿ ಮಾಜಿ ಮೂಡುಬಿದಿರೆ ಪುರಸಭಾ ಸದಸ್ಯ ಪುರಂದರ ದೇವಾಡಿಗ, ಮೂಡುಬಿದಿರೆ ಯೋಜನಾ ಪ್ರಾಧಿಕಾರದ ಸದಸ್ಯ ಹರ್ಷವರ್ಧನ್ ಪಡಿವಾಳ್, ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ್ ಸುನಿಲ್, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಮಾಜಿ ಪುರಸಭಾ ಸದಸ್ಯ ಸುರೇಶ್ ಪ್ರಭು, ನವೀನ್ ಕೋಟ್ಯಾನ್, ಮಲ್ಲಿಕಾ ಸುಕೇಶ್, ರಾಜೇಶ್ ಶೆಟ್ಟಿ ಹಾಗೂ ಸಂತೋಷ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
