ಉಡುಪಿ: 28 ರ ಹರೆಯದ ಯುವಕ ಹೃದಯಾಘಾತದಿಂದ ನಿಧನ – vishwanews24

Featured, ಉಡುಪಿ

ಉಡುಪಿ: 28 ರ ಹರೆಯದ ಯುವಕ ಹೃದಯಾಘಾತದಿಂದ ನಿಧನ

ಉಡುಪಿ : ಖಾಸಗಿ ಹೊಟೇಲ್ ನಲ್ಲಿ ಮ್ಯಾನೆಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದ 28 ಹರೆಯದ ಯುವಕನೋರ್ವ ಹೃದಯಾಘಾತದಿಂದ ನಿಧನರಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಆತ್ರಾಡಿ ಪರೀಕ ನಿವಾಸಿ ಮಹೇಶ ಶೆಟ್ಟಿ(28) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಹೆಸರಾಂತ ಹೋಟೇಲ್ ವೊಂದರಲ್ಲಿ ಮ್ಯಾನೇಜ‌ರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವರಿಗೆ ಸೋಮವಾರ ರಾತ್ರಿ ಹಠಾತ್ ಆಗಿ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಬಿಲ್ಕಿಸ್ ಬಾನು ಪ್ರಕರಣ: ಸುಪ್ರೀಂ ಕೋರ್ಟ್ ತೀರ್ಪು ನ್ಯಾಯಾಂಗ ವ್ಯವಸ್ಥೆಯ ಮೇಲೆ ಇನ್ನೂ ನಂಬಿಕೆ ಉಳಿಸಿಕೊಳ್ಳಬಹುದು ಎಂಬ ಭಾವನೆ ಮೂಡಿಸಿದೆ : ವೆರೋನಿಕಾ ಕರ್ನೆಲಿಯೊ – vishwanews24

ಮಹೇಶ್‌ ಅವರು ಇತ್ತೀಚೆಗೆ ಹೊಟೇಲ್ ಮ್ಯಾನೇಜೆಂಟ್ ಕೋರ್ಸ್ ಮುಗಿಸಿದ್ದರು. ಬಳಿಕ ಉಡುಪಿ, ಮಂಗಳೂರಿನಲ್ಲಿ ಹೊಟೇಲ್ ಮ್ಯಾನೇಜ‌ರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಇವರು ಈ ಹಿಂದೆ ಆತ್ರಾಡಿಯಲ್ಲಿ ಡ್ಯಾನ್ಸ್‌ ಕ್ರಿವ್ ನೃತ್ಯ ತರಬೇತಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದರು. ಮ್ಯಾನೇಜರ್ ಕೆಲಸಕ್ಕೆ ಸೇರಿದ್ದರಿಂದ ಡ್ಯಾನ್ಸ್‌ ಕ್ಲಾಸ್ ಅನ್ನು ಮುನ್ನಡೆಸಲು ಆಗಿರಲಿಲ್ಲ.

ಆದರೆ, ನಿನ್ನೆಯಷ್ಟೇ ಡ್ಯಾನ್ಸ್‌ ಕ್ಲಾಸ್ ಅನ್ನು ಮತ್ತೆ ಮುನ್ನಡೆಸುತ್ತೇನೆಂದು ವಾಟ್ಸ್ಅಪ್ ಸ್ಟೇಟ್ಸ್ ಹಾಕಿದ್ದರು ಎನ್ನಲಾಗಿದೆ. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

ಹೆತ್ತ ಮಗನನ್ನೇ ಕೊಂದ ಪ್ರಕರಣ : ಸಿಇಒ ಸುಚನಾ ಸೇಠ್ 6 ದಿನ ಪೊಲೀಸ್ ಕಸ್ಟಡಿಗೆ – ಇಂದು ಬೆಂಗಳೂರಿನಲ್ಲಿ ಮಗುವಿನ ಅಂತ್ಯಸಂಸ್ಕಾರ – vishwanews24

Leave a Reply