ಉಡುಪಿ : ಖಾಸಗಿ ಹೊಟೇಲ್ ನಲ್ಲಿ ಮ್ಯಾನೆಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದ 28 ಹರೆಯದ ಯುವಕನೋರ್ವ ಹೃದಯಾಘಾತದಿಂದ ನಿಧನರಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಆತ್ರಾಡಿ ಪರೀಕ ನಿವಾಸಿ ಮಹೇಶ ಶೆಟ್ಟಿ(28) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಹೆಸರಾಂತ ಹೋಟೇಲ್ ವೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವರಿಗೆ ಸೋಮವಾರ ರಾತ್ರಿ ಹಠಾತ್ ಆಗಿ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮಹೇಶ್ ಅವರು ಇತ್ತೀಚೆಗೆ ಹೊಟೇಲ್ ಮ್ಯಾನೇಜೆಂಟ್ ಕೋರ್ಸ್ ಮುಗಿಸಿದ್ದರು. ಬಳಿಕ ಉಡುಪಿ, ಮಂಗಳೂರಿನಲ್ಲಿ ಹೊಟೇಲ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಇವರು ಈ ಹಿಂದೆ ಆತ್ರಾಡಿಯಲ್ಲಿ ಡ್ಯಾನ್ಸ್ ಕ್ರಿವ್ ನೃತ್ಯ ತರಬೇತಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದರು. ಮ್ಯಾನೇಜರ್ ಕೆಲಸಕ್ಕೆ ಸೇರಿದ್ದರಿಂದ ಡ್ಯಾನ್ಸ್ ಕ್ಲಾಸ್ ಅನ್ನು ಮುನ್ನಡೆಸಲು ಆಗಿರಲಿಲ್ಲ.
ಆದರೆ, ನಿನ್ನೆಯಷ್ಟೇ ಡ್ಯಾನ್ಸ್ ಕ್ಲಾಸ್ ಅನ್ನು ಮತ್ತೆ ಮುನ್ನಡೆಸುತ್ತೇನೆಂದು ವಾಟ್ಸ್ಅಪ್ ಸ್ಟೇಟ್ಸ್ ಹಾಕಿದ್ದರು ಎನ್ನಲಾಗಿದೆ. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ…
ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ…
ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ…