ಉಡುಪಿ : ಖಾಸಗಿ ಹೊಟೇಲ್ ನಲ್ಲಿ ಮ್ಯಾನೆಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದ 28 ಹರೆಯದ ಯುವಕನೋರ್ವ ಹೃದಯಾಘಾತದಿಂದ ನಿಧನರಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಆತ್ರಾಡಿ ಪರೀಕ ನಿವಾಸಿ ಮಹೇಶ ಶೆಟ್ಟಿ(28) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಹೆಸರಾಂತ ಹೋಟೇಲ್ ವೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವರಿಗೆ ಸೋಮವಾರ ರಾತ್ರಿ ಹಠಾತ್ ಆಗಿ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮಹೇಶ್ ಅವರು ಇತ್ತೀಚೆಗೆ ಹೊಟೇಲ್ ಮ್ಯಾನೇಜೆಂಟ್ ಕೋರ್ಸ್ ಮುಗಿಸಿದ್ದರು. ಬಳಿಕ ಉಡುಪಿ, ಮಂಗಳೂರಿನಲ್ಲಿ ಹೊಟೇಲ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಇವರು ಈ ಹಿಂದೆ ಆತ್ರಾಡಿಯಲ್ಲಿ ಡ್ಯಾನ್ಸ್ ಕ್ರಿವ್ ನೃತ್ಯ ತರಬೇತಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದರು. ಮ್ಯಾನೇಜರ್ ಕೆಲಸಕ್ಕೆ ಸೇರಿದ್ದರಿಂದ ಡ್ಯಾನ್ಸ್ ಕ್ಲಾಸ್ ಅನ್ನು ಮುನ್ನಡೆಸಲು ಆಗಿರಲಿಲ್ಲ.
ಆದರೆ, ನಿನ್ನೆಯಷ್ಟೇ ಡ್ಯಾನ್ಸ್ ಕ್ಲಾಸ್ ಅನ್ನು ಮತ್ತೆ ಮುನ್ನಡೆಸುತ್ತೇನೆಂದು ವಾಟ್ಸ್ಅಪ್ ಸ್ಟೇಟ್ಸ್ ಹಾಕಿದ್ದರು ಎನ್ನಲಾಗಿದೆ. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…